ಜಿ ಪರಮೇಶ್ವರ್ 
ರಾಜಕೀಯ

ಸುಮ್ಮನೆ ಸ್ಟೀಲ್ ಬ್ರಿಡ್ಜ್‌ಗೆ ವಿರೋಧಿಸುವುದಲ್ಲ, ಪರಿಹಾರಕ್ಕೆ ಸೂಕ್ತ ಸಲಹೆ ನೀಡಿ: ಡಿಸಿಎಂ ಪರಮೇಶ್ವರ್

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ಸ್ಟೀಲ್ ಬ್ರಿಡ್ಜ್ ಯೋಜನೆಗೆ ನೀವು ವಿರೋಧಿಸುವುದಾದರೆ, ಅದನ್ನು ಪರಿಹರಿಸಬಹುದಾದ ಸಲಹೆಯನ್ನು ನೀಡಿ ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು...

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ಸ್ಟೀಲ್ ಬ್ರಿಡ್ಜ್ ಯೋಜನೆಗೆ ನೀವು ವಿರೋಧಿಸುವುದಾದರೆ, ಅದನ್ನು ಪರಿಹರಿಸಬಹುದಾದ ಸಲಹೆಯನ್ನು ನೀಡಿ ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಮನವಿ ಮಾಡಿದ್ದಾರೆ. 
ಸ್ಟೀಲ್ ಬ್ರಿಡ್ಜ್‌ ಯೋಜನೆಯಿಂದ ಬಸವೇಶ್ವರ ಸರ್ಕಲ್ ನಿಂದ ಹೆಬ್ಬಾಳದ ಇಸ್ಟೀಂ ಮಾಲ್ ವರೆಗಿನ ಜನರಿಗೆ ಉಪಯೋಗವಾಗಲಿದ್ದು ಸಂಚಾರ ದಟ್ಟನೆ ಕಡಿಮೆಯಾಗುತ್ತದೆ. ಈ ಯೋಜನೆಯನ್ನು ಪಾರದರ್ಶಕವಾಗಿ ಮಾಡಲಾಗುತ್ತದೆ. ಇದನ್ನು ಎಲಿವೆಟೆಡ್ ಕಾರಿಡಾರ್ ಎಂದು ಕರೆಯಬಹುದು. ಆದರೆ ಜನರು ಇದನ್ನು ಸ್ಟೀಲ್ ಬ್ರಿಡ್ಜ್ ಎಂದು ಕರೆಯುತ್ತಿದ್ದಾರೆ. 
ಈ ಯೋಜನೆಯಿಂದ ಕಿಕ್ ಬ್ಯಾಕ್ ಪಡೆಯಲಾಗುತ್ತದೆ ಎಂದು ಆರೋಪಿಸುವವರು ಸಂಚಾರಿ ದಟ್ಟನೆ ಕಡಿಮೆ ಮಾಡುವ ಸಲಹೆಯನ್ನು ನೀಡಿ ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಸರ್ಕಾರದ ಯೋಜನೆಯನ್ನು ಈ ಹಿಂದೆ ಸಾರ್ವಜಿಕರು ಹಾಗೂ ರಾಜಕೀಯ ಪಕ್ಷಗಳ ತೀವ್ರ ವಿರೋಧದಿಂದ ನಿಂತುಹೋಗಿತ್ತು. ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮತ್ತೆ ಈ ಯೋಜನೆಯನ್ನು ಜಾರಿಗೆ ತರುವ ಪ್ರಯತ್ನಗಳು ನಡೆಯುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT