ಜಿ ಪರಮೇಶ್ವರ್ 
ರಾಜಕೀಯ

ಸುಮ್ಮನೆ ಸ್ಟೀಲ್ ಬ್ರಿಡ್ಜ್‌ಗೆ ವಿರೋಧಿಸುವುದಲ್ಲ, ಪರಿಹಾರಕ್ಕೆ ಸೂಕ್ತ ಸಲಹೆ ನೀಡಿ: ಡಿಸಿಎಂ ಪರಮೇಶ್ವರ್

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ಸ್ಟೀಲ್ ಬ್ರಿಡ್ಜ್ ಯೋಜನೆಗೆ ನೀವು ವಿರೋಧಿಸುವುದಾದರೆ, ಅದನ್ನು ಪರಿಹರಿಸಬಹುದಾದ ಸಲಹೆಯನ್ನು ನೀಡಿ ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು...

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ಸ್ಟೀಲ್ ಬ್ರಿಡ್ಜ್ ಯೋಜನೆಗೆ ನೀವು ವಿರೋಧಿಸುವುದಾದರೆ, ಅದನ್ನು ಪರಿಹರಿಸಬಹುದಾದ ಸಲಹೆಯನ್ನು ನೀಡಿ ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಮನವಿ ಮಾಡಿದ್ದಾರೆ. 
ಸ್ಟೀಲ್ ಬ್ರಿಡ್ಜ್‌ ಯೋಜನೆಯಿಂದ ಬಸವೇಶ್ವರ ಸರ್ಕಲ್ ನಿಂದ ಹೆಬ್ಬಾಳದ ಇಸ್ಟೀಂ ಮಾಲ್ ವರೆಗಿನ ಜನರಿಗೆ ಉಪಯೋಗವಾಗಲಿದ್ದು ಸಂಚಾರ ದಟ್ಟನೆ ಕಡಿಮೆಯಾಗುತ್ತದೆ. ಈ ಯೋಜನೆಯನ್ನು ಪಾರದರ್ಶಕವಾಗಿ ಮಾಡಲಾಗುತ್ತದೆ. ಇದನ್ನು ಎಲಿವೆಟೆಡ್ ಕಾರಿಡಾರ್ ಎಂದು ಕರೆಯಬಹುದು. ಆದರೆ ಜನರು ಇದನ್ನು ಸ್ಟೀಲ್ ಬ್ರಿಡ್ಜ್ ಎಂದು ಕರೆಯುತ್ತಿದ್ದಾರೆ. 
ಈ ಯೋಜನೆಯಿಂದ ಕಿಕ್ ಬ್ಯಾಕ್ ಪಡೆಯಲಾಗುತ್ತದೆ ಎಂದು ಆರೋಪಿಸುವವರು ಸಂಚಾರಿ ದಟ್ಟನೆ ಕಡಿಮೆ ಮಾಡುವ ಸಲಹೆಯನ್ನು ನೀಡಿ ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಸರ್ಕಾರದ ಯೋಜನೆಯನ್ನು ಈ ಹಿಂದೆ ಸಾರ್ವಜಿಕರು ಹಾಗೂ ರಾಜಕೀಯ ಪಕ್ಷಗಳ ತೀವ್ರ ವಿರೋಧದಿಂದ ನಿಂತುಹೋಗಿತ್ತು. ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮತ್ತೆ ಈ ಯೋಜನೆಯನ್ನು ಜಾರಿಗೆ ತರುವ ಪ್ರಯತ್ನಗಳು ನಡೆಯುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT