ರಾಜಕೀಯ

ಸೋದರ ರಮೇಶ್ ನ್ನು ಭೇಟಿ ಮಾಡಿ ಮಾತನಾಡುತ್ತೇನೆ: ಸತೀಶ್ ಜಾರಕಿಹೊಳಿ

Sumana Upadhyaya

ಬೆಳಗಾವಿ: ನಾನು ಇನ್ನೂ ನನ್ನ ಸೋದರನನ್ನು ಭೇಟಿ ಮಾಡಿಲ್ಲ, ಇನ್ನೊಂದೆರಡು ದಿನ ಕಳೆದ ನಂತರ ಭೇಟಿ ಮಾಡುತ್ತೇನೆ. ಕಾಂಗ್ರೆಸ್ ನಾಯಕರು ಅತೃಪ್ತ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಬಗೆಹರಿಸಲು ತಯಾರಿದ್ದಾರೆ ಎಂದು ಅರಣ್ಯ ಖಾತೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ನಿನ್ನೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಬೆಂಗಳೂರಿನಿಂದ ಮನೆಗೆ ವಾಪಸ್ಸಾಗಿದ್ದಾರೆ. ಮುಂದಿನ ಎರಡು ಮೂರು ದಿನಗಳ ಕಾಲ ಗೋಕಾಕ್ ನಲ್ಲಿ ಇರಲಿದ್ದಾರೆ, ಅಲ್ಲಿ ನಾನು ಭೇಟಿಯಾಗಲು ನೋಡುತ್ತೇನೆ. ಅವರಿಗೆ ಅನ್ಯಾಯವಾಗಿದೆ ಎಂದು ಹೇಳುತ್ತಿದ್ದು ನಾನು ಸೇರಿದಂತೆ ಬೇರೆ ಕಾಂಗ್ರೆಸ್ ನಾಯಕರು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲು ಸಿದ್ಧರಿದ್ದೇವೆ. ಅದನ್ನು ಅವರು ಯಾವ ಸಮಯದಲ್ಲಿ ಬೇಕಾದರೂ ಕೂಡ ಮಾತನಾಡಬಹುದು ಎಂದರು.

ವಿಧಾನಸೌಧದಲ್ಲಿ ಸಚಿವ ಪುಟ್ಟರಂಗಶೆಟ್ಟಿಯವರ ಪಿಎ ಬಳಿ ಹಣ ಸಿಕ್ಕಿರುವ ಪ್ರಕರಣ ತನಿಖೆ ನಡೆಯುತ್ತಿದ್ದು ಸದ್ಯದಲ್ಲಿಯೇ ಸತ್ಯ ಹೊರಬರಲಿದೆ ಎಂದು ಹೇಳಿದರು.

SCROLL FOR NEXT