ಸಂಗ್ರಹ ಚಿತ್ರ 
ರಾಜಕೀಯ

ಮಂಡ್ಯದಲ್ಲಿ ಎಚ್ ಡಿ ದೇವೇಗೌಡರ ಸ್ಪರ್ಧೆ: ಬೆಂಬಲಿಗರ ಸಭೆಯಲ್ಲಿ ನಿಖಿಲ್ ಹೇಳಿದ್ದೇನು?

ಮಂಡ್ಯದಿಂದ ಸುಮಲತಾ ಅಂಬರೀಷ್ ಅವರು ಸ್ಪರ್ಧಿಸುವ ವಿಚಾರ ವ್ಯಾಪಕವಾಗಿ ಕೇಳಿಬರುತ್ತಿರುವಂತೆಯೇ ಇತ್ತ ಜೆಡಿಎಸ್ ವತಿಯಿಂದಲೂ ಪ್ರಭಾವಿ ರಾಜಕಾಣಿಯೊಬ್ಬರು ಮಂಡ್ಯದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಮಂಡ್ಯದಿಂದ ಸುಮಲತಾ ಅಂಬರೀಷ್ ಅವರು ಸ್ಪರ್ಧಿಸುವ ವಿಚಾರ ವ್ಯಾಪಕವಾಗಿ ಕೇಳಿಬರುತ್ತಿರುವಂತೆಯೇ ಇತ್ತ ಜೆಡಿಎಸ್ ವತಿಯಿಂದಲೂ ಪ್ರಭಾವಿ ರಾಜಕಾಣಿಯೊಬ್ಬರು ಮಂಡ್ಯದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ನ ಎಲ್ ಆರ್ ಶಿವರಾಮೇ ಗೌಡ ಅವರು ಸಂಸದರಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಪಕ್ಷದಿಂದ ಸುಮಲತಾ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಸುಮಲತಾ ಅವರ ಸ್ಪರ್ಧೆ ಖಚಿತವಾಗಿಲ್ಲವಾದರೂ ಒಂದು ವೇಳೆ ಅವರು ಮಂಡ್ಯದಿಂದ ಸ್ಪರ್ಧಿಸಿದರೆ ಆಗ ಜೆಡಿಎಸ್ ಗೆಲುವ ಕಷ್ಟ ಸಾಧ್ಯವಾಗಲಿದೆ. ಇದೇ ಕಾರಣಕ್ಕೆ ಗೌಡರ ಕುಟುಂಬದಿಂದ ಒಬ್ಬರು ಈ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಹಿಂದೆ ಈ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆಯಾದರೂ, ಸ್ವತಃ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಹೆಸರೂ ಕೂಡ ಬಲವಾಗಿ ಕೇಳಿಬರುತ್ತಿದೆ. ಈ ಬಗ್ಗೆ ಸ್ವತಃ ನಿಖಿಲ್ ಕುಮಾರಸ್ವಾಮಿ ಅವರು ಇತ್ತೀಚೆಗೆ ಮಂಡ್ಯದ ಮದ್ದೂರು ತಾಲೂಕಿನ ಕೆಎಂದೊಡ್ಡಿಯಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿ, ನನ್ನ ಸ್ಪರ್ಧೆ ಕುರಿತು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಒಂದು ವೇಳೆ ಮಂಡ್ಯದಿಂದ ದೇವೇಗೌಡರು ಸ್ಪರ್ಧಿಸಿದರೆ, ಅವರ ಗೆಲುವು ಸಾಮಾನ್ಯವಾಗಿರಬಾರದು. ಅಭೂತಪೂರ್ವ ಗೆಲುವಾಗಿರಬೇಕು. ಇದಕ್ಕಾಗಿ ನಾನು ಕೂಡ ನಿಮ್ಮೊಂದಿಗೆ ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.
ಆ ಮೂಲಕ ನಿಖಿಲ್ ಕುಮಾರಸ್ವಾಮಿ ಅವರು ದೇವೇಗೌಡರು ಮಂಡ್ಯದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳುವ ಮೂಲಕ ಹೊಸದೊಂದು ಚರ್ಚೆ ಹುಟ್ಟು ಹಾಕಿದ್ದಾರೆ. ಅಲ್ಲದೆ ನಿಖಿಲ್ ಅವರ ಹೇಳಿಕೆಯ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT