ಸಂಗ್ರಹ ಚಿತ್ರ 
ರಾಜಕೀಯ

ಮಂಡ್ಯದಲ್ಲಿ ಎಚ್ ಡಿ ದೇವೇಗೌಡರ ಸ್ಪರ್ಧೆ: ಬೆಂಬಲಿಗರ ಸಭೆಯಲ್ಲಿ ನಿಖಿಲ್ ಹೇಳಿದ್ದೇನು?

ಮಂಡ್ಯದಿಂದ ಸುಮಲತಾ ಅಂಬರೀಷ್ ಅವರು ಸ್ಪರ್ಧಿಸುವ ವಿಚಾರ ವ್ಯಾಪಕವಾಗಿ ಕೇಳಿಬರುತ್ತಿರುವಂತೆಯೇ ಇತ್ತ ಜೆಡಿಎಸ್ ವತಿಯಿಂದಲೂ ಪ್ರಭಾವಿ ರಾಜಕಾಣಿಯೊಬ್ಬರು ಮಂಡ್ಯದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಮಂಡ್ಯದಿಂದ ಸುಮಲತಾ ಅಂಬರೀಷ್ ಅವರು ಸ್ಪರ್ಧಿಸುವ ವಿಚಾರ ವ್ಯಾಪಕವಾಗಿ ಕೇಳಿಬರುತ್ತಿರುವಂತೆಯೇ ಇತ್ತ ಜೆಡಿಎಸ್ ವತಿಯಿಂದಲೂ ಪ್ರಭಾವಿ ರಾಜಕಾಣಿಯೊಬ್ಬರು ಮಂಡ್ಯದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ನ ಎಲ್ ಆರ್ ಶಿವರಾಮೇ ಗೌಡ ಅವರು ಸಂಸದರಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಪಕ್ಷದಿಂದ ಸುಮಲತಾ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಸುಮಲತಾ ಅವರ ಸ್ಪರ್ಧೆ ಖಚಿತವಾಗಿಲ್ಲವಾದರೂ ಒಂದು ವೇಳೆ ಅವರು ಮಂಡ್ಯದಿಂದ ಸ್ಪರ್ಧಿಸಿದರೆ ಆಗ ಜೆಡಿಎಸ್ ಗೆಲುವ ಕಷ್ಟ ಸಾಧ್ಯವಾಗಲಿದೆ. ಇದೇ ಕಾರಣಕ್ಕೆ ಗೌಡರ ಕುಟುಂಬದಿಂದ ಒಬ್ಬರು ಈ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಹಿಂದೆ ಈ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆಯಾದರೂ, ಸ್ವತಃ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಹೆಸರೂ ಕೂಡ ಬಲವಾಗಿ ಕೇಳಿಬರುತ್ತಿದೆ. ಈ ಬಗ್ಗೆ ಸ್ವತಃ ನಿಖಿಲ್ ಕುಮಾರಸ್ವಾಮಿ ಅವರು ಇತ್ತೀಚೆಗೆ ಮಂಡ್ಯದ ಮದ್ದೂರು ತಾಲೂಕಿನ ಕೆಎಂದೊಡ್ಡಿಯಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿ, ನನ್ನ ಸ್ಪರ್ಧೆ ಕುರಿತು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಒಂದು ವೇಳೆ ಮಂಡ್ಯದಿಂದ ದೇವೇಗೌಡರು ಸ್ಪರ್ಧಿಸಿದರೆ, ಅವರ ಗೆಲುವು ಸಾಮಾನ್ಯವಾಗಿರಬಾರದು. ಅಭೂತಪೂರ್ವ ಗೆಲುವಾಗಿರಬೇಕು. ಇದಕ್ಕಾಗಿ ನಾನು ಕೂಡ ನಿಮ್ಮೊಂದಿಗೆ ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.
ಆ ಮೂಲಕ ನಿಖಿಲ್ ಕುಮಾರಸ್ವಾಮಿ ಅವರು ದೇವೇಗೌಡರು ಮಂಡ್ಯದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳುವ ಮೂಲಕ ಹೊಸದೊಂದು ಚರ್ಚೆ ಹುಟ್ಟು ಹಾಕಿದ್ದಾರೆ. ಅಲ್ಲದೆ ನಿಖಿಲ್ ಅವರ ಹೇಳಿಕೆಯ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಳೆ ವಿಶಿಷ್ಠ ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ; ಈ ಬಗ್ಗೆ ಸ್ವತಃ ಸಿಎಂ ಹೇಳಿದ್ದೇನು?

ಬೀದರ್: ಅರಣ್ಯ ಭೂಮಿ ಒತ್ತುವರಿ ಆರೋಪಿಸಿದ್ದಕ್ಕೆ KDP ಸಭೆಯಲ್ಲೇ BJP ಶಾಸಕನ ಕಡೆ ನುಗ್ಗಿದ Congress MLC, Video Viral!

ಕೊಪ್ಪಳದಲ್ಲಿ ಹೈಡ್ರಾಮಾ: ಕೇಂದ್ರ ಸಚಿವ ಸೋಮಣ್ಣರತ್ತ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು!

ಒಮನ್‌ನಲ್ಲಿ ಟ್ರೆಕ್ಕಿಂಗ್ ದುರಂತ: ಮಲಯಾಳಂ ಹಿನ್ನೆಲೆ ಗಾಯಕಿ 'ಚಿತ್ರಾ ಅಯ್ಯರ್' ಸಹೋದರಿ ಸಾವು!

ನನಗಿರುವ ಮಾಹಿತಿ ಪ್ರಕಾರ ನಾಯಕತ್ವ ಬದಲಾವಣೆ ಇಲ್ಲ: ಸಚಿವ ಕೃಷ್ಣಬೈರೇಗೌಡ ಸ್ಫೋಟಕ ಹೇಳಿಕೆ

SCROLL FOR NEXT