ರಾಜಕೀಯ

ದೆಹಲಿ ತಲುಪಿದ 'ಆಪರೇಷನ್ 'ರಾಜಕೀಯ: ವರಿಷ್ಠರೊಂದಿಗೆ ರಾಜ್ಯ ಕಾಂಗ್ರೆಸ್ ನಾಯಕರ ಮಾತುಕತೆ

ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಪ್ರಯತ್ನಿಸುತ್ತಿದೆ ಎಂಬ ಊಹಾಪೋಹಗಳ ನಡುವೆ ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸುವಂತೆ ರಾಜ್ಯ ಕಾಂಗ್ರೆಸ್ ನಲ್ಲಿನ ಹಿರಿಯ ನಾಯಕರು ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದಾರೆ....

ಕೋಲಾರ:  ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು  ಬಿಜೆಪಿ ಆಪರೇಷನ್ ಕಮಲಕ್ಕೆ ಪ್ರಯತ್ನಿಸುತ್ತಿದೆ ಎಂಬ ಊಹಾಪೋಹಗಳ ನಡುವೆ ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸುವಂತೆ  ರಾಜ್ಯ ಕಾಂಗ್ರೆಸ್ ನಲ್ಲಿನ  ಹಿರಿಯ ನಾಯಕರು  ಪಕ್ಷದ ವರಿಷ್ಠರಿಗೆ ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಖರೀದಿಸಲು ಪ್ರಯತ್ನಿಸುತ್ತಿದೆ ಎಂಬ ವಿಚಾರವನ್ನು  ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಎಐಸಿಸಿ  ಪ್ರಧಾನ ಕಾರ್ಯದರ್ಶಿ ರಾಜ್ಯ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪ್ರಸ್ತುತದಲ್ಲಿನ ರಾಜ್ಯ ರಾಜಕೀಯದ ಬಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ವೇಣುಗೋಪಾಲ್, ಗುಲಾಂ ನಬಿ ಅಜಾದ್,  ಅಹ್ಮದ್ ಪಟೇಲ್ ಅವರೊಂದಿಗೆ  ರಾಜ್ಯದಲ್ಲಿನ ಹಲವು ನಾಯಕರು ಮಾತುಕತೆ ನಡೆಸಿದ್ದು, ಪಕ್ಷದ ಹಿತದೃಷ್ಟಿ  ಹಾಗೂ ಇತರ ಎಲ್ಲಾ ಅಂಶಗಳ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂಬುದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT