ರಾಜಕೀಯ

ಆಪರೇಷನ್ ಕಮಲದ ಭೀತಿ: ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಕೀಯ ಕಾರ್ಯದರ್ಶಿಯಾಗಿ ವಿ. ಮುನಿಯಪ್ಪ ನೇಮಕ

Nagaraja AB

ಬೆಂಗಳೂರು:ಶಿಡ್ಲಘಟ್ಟ ವಿಧಾನಸಭಾ  ಕ್ಷೇತ್ರದ ಶಾಸಕ ವಿ. ಮುನಿಯಪ್ಪ ಅವರನ್ನು  ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

 ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಯ 104 ಶಾಸಕರು ಹರಿಯಾಣದ ಗುರುಗ್ರಾಮ್ ನಲ್ಲಿ ವಾಸ್ತವ್ಯೂ ಹೂಡಿದ್ದು,ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಖರೀದಿಯ ಭೀತಿಯಲ್ಲಿರುವಂತೆ  ಇದೀಗ  ವಿ. ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಕೆಲ ಬಿಜೆಪಿಯ ಶಾಸಕರೊಂದಿಗೆ ಮೂವರು ಕಾಂಗ್ರೆಸ್ ಶಾಸಕರು ನಿನ್ನೆಯಿಂದ  ಮುಂಬೈನ ಹೋಟೆಲ್ ವೊಂದರಲ್ಲಿ ವಾಸ್ತವ್ಯ ಹೂಡಿದ್ದು,  ಆಪರೇಷನ್ ಕಮಲದ ಅನುಮಾನ ಮೂಡುತ್ತಿದೆ.
ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಭದ್ರಗೊಳಿಸಲು ಆಡಳಿತಾ ರೂಢ ಪಕ್ಷಗಳ ಶಾಸಕರನ್ನು ಖರೀದಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.
SCROLL FOR NEXT