ಸಿದ್ದರಾಮಯ್ಯ 
ರಾಜಕೀಯ

ಬಿಜೆಪಿ ಪ್ರಯತ್ನ ಎಂದಿಗೂ ಫಲಿಸದು, 'ಆಪರೇಷನ್ ಕಮಲ' ವಿಫಲ ಯತ್ನ: ಸಿದ್ದರಾಮಯ್ಯ

ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ ಅವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ,...

ಹುಬ್ಬಳ್ಳಿ: ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ ಅವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ, ತಿಪ್ಪರಲಾಗ ಹಾಕಿದಲೂ ಅವರ ಪ್ರಯತ್ನ ಈಡೇರದು ಎಂದು ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಎಲ್ಲಾ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಬಿಜೆಪಿಗೆ ಯಾವ ಶಾಸಕರು ಹೋಗುವುದಿಲ್ಲ ಎಂದು ಗೊತ್ತಿದ್ದರೂ ಅವರೆಲ್ಲಾ ವಿಫಲ ಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಆಪರೇಷನ್ ಕಮಲ ಎಂಬ ರೋಗವನ್ನು ತಂದಿಟ್ಟವರು ಬಿಜೆಪಿಯವರು, ಯಾರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲವೋ ಅವರು ಇಂಥಹ ಕೆಲಸಗಳಿಗೆ ಕೈ ಹಾಕುತ್ತಾರೆ.
ಇನ್ನೂ ಈಗ ಇರುವ ಯಾವುದೇ ಹಾಲಿ ಸಚಿವರು ತಮ್ಮ ಹುದ್ದೆಯಿಂದ ಕೆಳಗಿಳಿಯುವುದಿಲ್ಲ ಹಾಗೂ ಯಾವುದೇ ಶಾಸಕರಿಗೂ ಯಾವುದೇ ಹುದ್ದೆಯ ಭರವಸೆ ಕೂಡ ನೀಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ ಸಿದ್ದರಾಮಯ್ಯ ಜನವರಿ 18 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು ಎಲ್ಲಾ ಶಾಸಕರು ಹಾಜರಾಗಲಿದ್ದಾರೆ ಎಂಬ ಸ್ಪಷ್ಟಪಡಿಸಿದ್ದಾರೆ..

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT