ಸಂಸದೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡ ಶಾಸಕರು ವಿಧಾನ ಸೌಧದಲ್ಲಿ ಪ್ರಮಾಣವಚನ ಸ್ವೀಕರಿಸಿದರು. 
ರಾಜಕೀಯ

ಸಂಸದೀಯ ಕಾರ್ಯದರ್ಶಿಗಳಾಗಿ 8 ಕಾಂಗ್ರೆಸ್ ಶಾಸಕರು ನೇಮಕ

ರಾಜ್ಯದ ಎಂಟು ಮಂದಿ ಶಾಸಕರು ಸಂಸದೀಯ ಕಾರ್ಯದರ್ಶಿಗಳಾಗಿ ನಿನ್ನೆ ಪ್ರಮಾಣವಚನ ...

ಬೆಂಗಳೂರು: ರಾಜ್ಯದ ಎಂಟು ಮಂದಿ ಶಾಸಕರು ಸಂಸದೀಯ ಕಾರ್ಯದರ್ಶಿಗಳಾಗಿ ನಿನ್ನೆ ಪ್ರಮಾಣವಚನ ಸ್ವೀಕರಿಸಿದರು.

ಬೈಲಹೊಂಗಲದ ಶಾಸಕ ಮಹಂತೇಶ ಕೌಜಲಗಿ, ಖಾನಾಪುರದ ಅಂಜಲಿ ನಿಂಬಾಳ್ಕರ್, ಕೆಜಿಎಫ್ ನ ರೂಪಾ ಶಶಿಧರ್, ಕೊಪ್ಪಳ ಕ್ಷೇತ್ರದ ರಾಘವೇಂದ್ರ ಹಿತ್ನಾಳ್, ಲಿಂಗಸುಗೂರಿನ ದುರ್ಗಪ್ಪ ಹೂಲಗೇರಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬರ್, ಐವಾನ್ ಡಿಸೋಜ ಹಾಗೂ ವಿ ಗೋವಿಂದರಾಜು. ಈ ಸಂಬಂಧ ಜನವರಿ 7ರಂದು ಗೆಜೆಟ್ ಅಧಿಸೂಚನೆ ಹೊರಡಿಸಲಾಗಿತ್ತು ಅವರು ನಿನ್ನೆ ಪ್ರಮಾಣವಚನ ಸ್ವೀಕರಿಸಿದರು.

ಸಂಸದೀಯ ಕಾರ್ಯದರ್ಶಿಗಳ ನೇಮಕ ಮತ್ತು 1963ರ ಕರ್ನಾಟಕ ಸಂಸದೀಯ ಕಾರ್ಯದರ್ಶಿ ಭತ್ಯೆ ಕಾಯ್ದೆ ಅಸಂವಿಧಾನಿಕ ಎಂದು ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಸಂಸದೀಯ ಕಾರ್ಯದರ್ಶಿಗಳಿಗೆ ರಾಜ್ಯ ಸಚಿವ ಸ್ಥಾನಮಾನ ದೊರೆಯಲಿದ್ದು ಕಾರು, ಕಚೇರಿ, ಸಿಬ್ಬಂದಿ ಮತ್ತು ಡಿಎ-ಡಿಎ ಸೌಲಭ್ಯ ದೊರೆಯಲಿದೆ.

ಸಂಸದೀಯ ಕಾರ್ಯದರ್ಶಿಗಳ ನೇಮಕದಿಂದ ಅವರು ಏನು ಮಾಡುತ್ತಾರೆ ಎಂದು ನೋಡುತ್ತೇವೆ ಎಂದು ಬಿಜೆಪಿ ನಾಯಕ ಸಿ ಟಿ ರವಿ ಹೇಳಿದರೆ, ಅಧಿಕಾರ ದುರುಪಯೋಗ ಮಾಡಿಕೊಳ್ಳಲು ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿ ವಕ್ತಾರ ಎಸ್ ಪ್ರಕಾಶ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ!

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

ವಾಲ್ಮೀಕಿ ಹಗರಣದ 'ಕಿಂಗ್ ಪಿನ್' ನಾಗೇಂದ್ರ ಔಟ್: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ! ಬಿಜೆಪಿ

ನೇಪಾಳದಲ್ಲಿ ದಿಢೀರ್ ಪ್ರವಾಹ: ಬಲಿಯಾದವರ ಸಂಖ್ಯೆ 538ಕ್ಕೆ ಏರಿಕೆ; 320 ಭಾರತೀಯ ಪ್ರವಾಸಿಗರು ನಾಪತ್ತೆ!

ಮೂಡ್ ಆಫ್ ದಿ ನೇಷನ್: ಪ್ರಧಾನಿ ರೇಸ್‌ನಲ್ಲಿ ಕೇಜ್ರಿವಾಲ್​ರನ್ನೇ ಹಿಂದಿಕ್ಕಿದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ!