ಸಂಸದೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡ ಶಾಸಕರು ವಿಧಾನ ಸೌಧದಲ್ಲಿ ಪ್ರಮಾಣವಚನ ಸ್ವೀಕರಿಸಿದರು. 
ರಾಜಕೀಯ

ಸಂಸದೀಯ ಕಾರ್ಯದರ್ಶಿಗಳಾಗಿ 8 ಕಾಂಗ್ರೆಸ್ ಶಾಸಕರು ನೇಮಕ

ರಾಜ್ಯದ ಎಂಟು ಮಂದಿ ಶಾಸಕರು ಸಂಸದೀಯ ಕಾರ್ಯದರ್ಶಿಗಳಾಗಿ ನಿನ್ನೆ ಪ್ರಮಾಣವಚನ ...

ಬೆಂಗಳೂರು: ರಾಜ್ಯದ ಎಂಟು ಮಂದಿ ಶಾಸಕರು ಸಂಸದೀಯ ಕಾರ್ಯದರ್ಶಿಗಳಾಗಿ ನಿನ್ನೆ ಪ್ರಮಾಣವಚನ ಸ್ವೀಕರಿಸಿದರು.

ಬೈಲಹೊಂಗಲದ ಶಾಸಕ ಮಹಂತೇಶ ಕೌಜಲಗಿ, ಖಾನಾಪುರದ ಅಂಜಲಿ ನಿಂಬಾಳ್ಕರ್, ಕೆಜಿಎಫ್ ನ ರೂಪಾ ಶಶಿಧರ್, ಕೊಪ್ಪಳ ಕ್ಷೇತ್ರದ ರಾಘವೇಂದ್ರ ಹಿತ್ನಾಳ್, ಲಿಂಗಸುಗೂರಿನ ದುರ್ಗಪ್ಪ ಹೂಲಗೇರಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬರ್, ಐವಾನ್ ಡಿಸೋಜ ಹಾಗೂ ವಿ ಗೋವಿಂದರಾಜು. ಈ ಸಂಬಂಧ ಜನವರಿ 7ರಂದು ಗೆಜೆಟ್ ಅಧಿಸೂಚನೆ ಹೊರಡಿಸಲಾಗಿತ್ತು ಅವರು ನಿನ್ನೆ ಪ್ರಮಾಣವಚನ ಸ್ವೀಕರಿಸಿದರು.

ಸಂಸದೀಯ ಕಾರ್ಯದರ್ಶಿಗಳ ನೇಮಕ ಮತ್ತು 1963ರ ಕರ್ನಾಟಕ ಸಂಸದೀಯ ಕಾರ್ಯದರ್ಶಿ ಭತ್ಯೆ ಕಾಯ್ದೆ ಅಸಂವಿಧಾನಿಕ ಎಂದು ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಸಂಸದೀಯ ಕಾರ್ಯದರ್ಶಿಗಳಿಗೆ ರಾಜ್ಯ ಸಚಿವ ಸ್ಥಾನಮಾನ ದೊರೆಯಲಿದ್ದು ಕಾರು, ಕಚೇರಿ, ಸಿಬ್ಬಂದಿ ಮತ್ತು ಡಿಎ-ಡಿಎ ಸೌಲಭ್ಯ ದೊರೆಯಲಿದೆ.

ಸಂಸದೀಯ ಕಾರ್ಯದರ್ಶಿಗಳ ನೇಮಕದಿಂದ ಅವರು ಏನು ಮಾಡುತ್ತಾರೆ ಎಂದು ನೋಡುತ್ತೇವೆ ಎಂದು ಬಿಜೆಪಿ ನಾಯಕ ಸಿ ಟಿ ರವಿ ಹೇಳಿದರೆ, ಅಧಿಕಾರ ದುರುಪಯೋಗ ಮಾಡಿಕೊಳ್ಳಲು ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿ ವಕ್ತಾರ ಎಸ್ ಪ್ರಕಾಶ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT