ಸಂಸದೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡ ಶಾಸಕರು ವಿಧಾನ ಸೌಧದಲ್ಲಿ ಪ್ರಮಾಣವಚನ ಸ್ವೀಕರಿಸಿದರು. 
ರಾಜಕೀಯ

ಸಂಸದೀಯ ಕಾರ್ಯದರ್ಶಿಗಳಾಗಿ 8 ಕಾಂಗ್ರೆಸ್ ಶಾಸಕರು ನೇಮಕ

ರಾಜ್ಯದ ಎಂಟು ಮಂದಿ ಶಾಸಕರು ಸಂಸದೀಯ ಕಾರ್ಯದರ್ಶಿಗಳಾಗಿ ನಿನ್ನೆ ಪ್ರಮಾಣವಚನ ...

ಬೆಂಗಳೂರು: ರಾಜ್ಯದ ಎಂಟು ಮಂದಿ ಶಾಸಕರು ಸಂಸದೀಯ ಕಾರ್ಯದರ್ಶಿಗಳಾಗಿ ನಿನ್ನೆ ಪ್ರಮಾಣವಚನ ಸ್ವೀಕರಿಸಿದರು.

ಬೈಲಹೊಂಗಲದ ಶಾಸಕ ಮಹಂತೇಶ ಕೌಜಲಗಿ, ಖಾನಾಪುರದ ಅಂಜಲಿ ನಿಂಬಾಳ್ಕರ್, ಕೆಜಿಎಫ್ ನ ರೂಪಾ ಶಶಿಧರ್, ಕೊಪ್ಪಳ ಕ್ಷೇತ್ರದ ರಾಘವೇಂದ್ರ ಹಿತ್ನಾಳ್, ಲಿಂಗಸುಗೂರಿನ ದುರ್ಗಪ್ಪ ಹೂಲಗೇರಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬರ್, ಐವಾನ್ ಡಿಸೋಜ ಹಾಗೂ ವಿ ಗೋವಿಂದರಾಜು. ಈ ಸಂಬಂಧ ಜನವರಿ 7ರಂದು ಗೆಜೆಟ್ ಅಧಿಸೂಚನೆ ಹೊರಡಿಸಲಾಗಿತ್ತು ಅವರು ನಿನ್ನೆ ಪ್ರಮಾಣವಚನ ಸ್ವೀಕರಿಸಿದರು.

ಸಂಸದೀಯ ಕಾರ್ಯದರ್ಶಿಗಳ ನೇಮಕ ಮತ್ತು 1963ರ ಕರ್ನಾಟಕ ಸಂಸದೀಯ ಕಾರ್ಯದರ್ಶಿ ಭತ್ಯೆ ಕಾಯ್ದೆ ಅಸಂವಿಧಾನಿಕ ಎಂದು ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಸಂಸದೀಯ ಕಾರ್ಯದರ್ಶಿಗಳಿಗೆ ರಾಜ್ಯ ಸಚಿವ ಸ್ಥಾನಮಾನ ದೊರೆಯಲಿದ್ದು ಕಾರು, ಕಚೇರಿ, ಸಿಬ್ಬಂದಿ ಮತ್ತು ಡಿಎ-ಡಿಎ ಸೌಲಭ್ಯ ದೊರೆಯಲಿದೆ.

ಸಂಸದೀಯ ಕಾರ್ಯದರ್ಶಿಗಳ ನೇಮಕದಿಂದ ಅವರು ಏನು ಮಾಡುತ್ತಾರೆ ಎಂದು ನೋಡುತ್ತೇವೆ ಎಂದು ಬಿಜೆಪಿ ನಾಯಕ ಸಿ ಟಿ ರವಿ ಹೇಳಿದರೆ, ಅಧಿಕಾರ ದುರುಪಯೋಗ ಮಾಡಿಕೊಳ್ಳಲು ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿ ವಕ್ತಾರ ಎಸ್ ಪ್ರಕಾಶ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT