ಯಡ್ಯೂರಪ್ಪ ಮತ್ತು ಜಿ.ಪರಮೇಶ್ವರ್ 
ರಾಜಕೀಯ

ಸಿಎಲ್ ಪಿಯಲ್ಲಿ ಕಾಂಗ್ರೆಸ್ ನೈಜ ಬಣ್ಣ ಬಯಲು: ಬಿಎಸ್ ವೈ; ನಮ್ಮ ಶಾಸಕರ ಬಗ್ಗೆ ಅವರು ಯೋಚಿಸಬೇಕಿಲ್ಲ: ಡಿಸಿಎಂ

ಶಾಸಕಾಂಗ ಸಭೆ ಜೆಡಿಎಸ್ ಕಾಂಗ್ರೆಸ್ ಗೆ ಸೇರಿದ್ದು, ಅವರ ಎಲ್ಲಾ ಸಮಸ್ಯೆಗಳಿಗೆ ನಾನು ಹೊಣೆಯಲ್ಲ, ನಮ್ಮ 104 ಶಾಸಕರು ನಮ್ಮ ಪಕ್ಷದ ಬಗ್ಗೆ ತಲೆ ಕೆಡಿಸಿಕೊಳ್ಳಬೇಕು,...

ಬೆಂಗಳೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರ 
ಸಭೆ ಕರೆದಿದ್ದಾರೆ, ಸಭೆಯ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಯಡಿಯೂರಪ್ಪ ಸಿಎಲ್ ಪಿ ಸಭೆಯಿಂದ ಕಾಂಗ್ರೆಸ್ ನೈಜ ಬಣ್ಣ ಬಯಲಾಗಲಿದೆ ಎಂದು ಹೇಳಿದ್ದಾರೆ.
ಶಾಸಕಾಂಗ ಸಭೆ ಜೆಡಿಎಸ್ ಕಾಂಗ್ರೆಸ್ ಗೆ ಸೇರಿದ್ದು, ಅವರ ಎಲ್ಲಾ ಸಮಸ್ಯೆಗಳಿಗೆ ನಾನು ಹೊಣೆಯಲ್ಲ, ನಮ್ಮ 104 ಶಾಸಕರು  ನಮ್ಮ ಪಕ್ಷದ ಬಗ್ಗೆ ತಲೆ ಕೆಡಿಸಿಕೊಳ್ಳಬೇಕು,  ಹಾಗೂ ನಾವು ಲೋಕಸಭೆ ಚುನಾವಣೆ ಬಗ್ಗೆ ಯೋಚಿಸುತ್ತಿದ್ದೇವೆ  ಎಂದು   ಯಡಿಯೂರಪ್ಪ ಹೇಳಿದ್ದಾರೆ.
ಇನ್ನೂ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ನಾವು ಸಿಎಲ್ ಪಿ ಸಭೆಯಲ್ಲಿ  ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲಾಗುತ್ತದೆ. ಹಾಗೂ ಸದ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚಿಸಲಾಗುವುದು ಎಂದು ಹೇಳಿದ್ದಾರೆ.
ಎಲ್ಲಾ ಶಾಸಕರು ಸಿಎಲ್ ಪಿ ಸಭೆಯಲ್ಲಿ ಭಾಗವಹಿಸುತ್ತಾರೆ, ನಮ್ಮ ಶಾಸಕರ ಬಗ್ಗೆ ಯಡಿಯೂರಪ್ಪ ಅವರು ಚಿಂತಿಸುವ ಅಗತ್ಯವಿಲ್ಲ ಎಂದು ಪರನೇಶ್ವರ್ ಟಾಂಗ್ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಸಾರಿಗೆ ಸಚಿವ byrati suresh ದಿಢೀರ್ ಸಿಟಿ ರೌಂಡ್ಸ್, ರಾತ್ರೋರಾತ್ರಿ BMTC ಚಾಲಕ, ನಿರ್ವಾಹಕರಿಗೆ ಅಮಾನತು ಶಾಕ್, Video

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!