ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಭ್ರಷ್ಟಾಚಾರ ವಿರುದ್ಧ ಮಾತನಾಡುವ ಮೋದಿ ಶಾಸಕರ ಖರೀದಿಗೆ ಹಣ ಎಲ್ಲಿಂದ ತರುತ್ತಾರೆ: ಕುಮಾರಸ್ವಾಮಿ

ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸುತ್ತೇನೆ ಎಂದು ಒಂದೆಡೆ ಪ್ರಧಾನಿ ಮೋದಿ ಹೇಳುತ್ತಾರೆ, ಆದರೆ ಮತ್ತೊಂದೆಡೆ ಅವರ ಪಕ್ಷದ ಮುಖಂಡರು ರಾಜ್ಯ ಕಾಂಗ್ರೆಸ್ ...

ಕೊಲ್ಕೋತಾ: ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸುತ್ತೇನೆ  ಎಂದು ಒಂದೆಡೆ ಪ್ರಧಾನಿ ಮೋದಿ ಹೇಳುತ್ತಾರೆ, ಆದರೆ ಮತ್ತೊಂದೆಡೆ ಅವರ ಪಕ್ಷದ ಮುಖಂಡರು ರಾಜ್ಯ ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಮುಂದಾಗಿದ್ದಾರೆ, ಇದಕ್ಕೆ ಹಣ ಎಲ್ಲಿಂದ ತರುತ್ತಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಕಳೆದ ಒಂದು ವಾರದಿಂದ ಎಲ್ಲಾ ಬೆಳವಣಿಗೆಗಳನ್ನು ನೀವು ನೋಡುತ್ತಿದ್ದೀರಿ,  ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ, ನಾನು ಪ್ರಧಾನ ಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ ಇತ್ತೀಚೆಗೆ ಪ್ರಧಾನ ಮಂತ್ರಿಗಳು ದೇಶವನ್ನು ಸ್ವಚ್ಛಗೊಳಿಸಲು ಹಾಗೂ ಭ್ರಷ್ಚಾಚಾರ ನಿರ್ಮೂಲನೆ ಮಾಡಲು ದೇಶದ ಜನತೆ ಸಹಕರಿಸಬೇಕು ಎಂದು ಕೇಳಿದ್ದರು, 
ಆದರೆ ಕರ್ನಾಟಕದಲ್ಲಿ ಏನಾಗುತ್ತಿದೆ, ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಎಲ್ಲಿಂದ ಹಣ ಬಂತು, ಅವರಿಗೆ ಬೆಂಬಲ ನೀಡುತ್ತಿರುವವರು ಯಾರು? ಅವರಿಗೆ ಹಣ ಎಲ್ಲಿಂಜದ ಬಂತು? ಎಂದು ಕುಮಾರ ಸ್ವಾಮಿ ಪ್ರಶ್ನಿಸಿದ್ದಾರೆ,
ಇನ್ನೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಶಾಸಕರು ಗೈರಿನ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಏನು ತೊಂದರೆಯಿಲ್ಲ,  ಅವರು ನಮ್ಮ ಜೊತೆಗೆ ಇರುತ್ತಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT