ಡಾ ಜಿ ಪರಮೇಶ್ವರ್ 
ರಾಜಕೀಯ

'ಕೈ ಶಾಸಕರ' ಗಲಾಟೆ ಪ್ರಕರಣ; ನಂಗೇನೂ ಗೊತ್ತಿಲ್ಲ ಎಂದ ಡಿಸಿಎಂ ಪರಮೇಶ್ವರ್!

ಬಳ್ಳಾರಿಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ...

ಬೆಂಗಳೂರು: ಬಳ್ಳಾರಿಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾಧ್ಯಮಗಳಿಂದಲೇ ಗೊತ್ತಾಯಿತು. ನಮ್ಮ ನಾಯಕರ್ಯಾರೂ ಸಂಪರ್ಕಕ್ಕೆ ಸಿಗಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.

ನಗರದ ಹೊರವಲಯದ ಬಿಡದಿ ಸಮೀಪ ಈಗಲ್ಟನ್ ರೆಸಾರ್ಟ್ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ಶಾಸಕರ ಮಧ್ಯೆ ಗಲಾಟೆ ನಡೆದಿರುವ ಬಗ್ಗೆ ಈಗ ತಾನೇ ಮಾಧ್ಯಮಗಳಿಂದ ತಿಳಿದುಕೊಂಡೆ. ನಿನ್ನೆ ರಾತ್ರಿ 8 ಗಂಟೆಯವರೆಗೆ ನಾನು ಕೂಡ ರೆಸಾರ್ಟ್ ನಲ್ಲಿಯೇ ಇದ್ದೆ. ನನ್ನ ಬೇರೆ ಕಾರ್ಯಕ್ರಮವಿದೆ ಎಂದು ಹೊರಹೋಗಿದ್ದೆ. ರಾತ್ರಿ 8 ಗಂಟೆಯಿಂದ ಬೆಳಗ್ಗೆಯವರೆಗೆ ಏನು ನಡೆಯಿತು ಎಂದು ನನಗೆ ಗೊತ್ತಿಲ್ಲ. ಇದೀಗ ಒಳಗೆ ಹೋಗಿ ಮಾಹಿತಿ ಪಡೆದು ನಿಮಗೆ ತಿಳಿಸುತ್ತೇನೆ ಎಂದರು.

ಮಾಧ್ಯಮಗಳಲ್ಲಿ ಸುದ್ದಿ ಬರುತ್ತಿದ್ದಂತೆ ಬೇರೆ ಶಾಸಕರನ್ನು ಸಂಪರ್ಕಿಸಿ ವಿಚಾರಿಸಿದಾಗ ಅವರು ಅಂತಹ ಘಟನೆಗಳು ಏನೂ ನಡೆದಿಲ್ಲ ಎಂದರು. ಇನ್ನು ಸಚಿವ ಡಿ ಕೆ ಶಿವಕುಮಾರ್ ಅವರನ್ನು ಸಂಪರ್ಕಿಸಲೆತ್ನಿಸಿದೆ, ಅವರು ಫೋನ್ ಸಂಪರ್ಕಕ್ಕೆ ಸಿಗಲಿಲ್ಲ ಎಂದರು.

ಬಿಜೆಪಿ ನಾಯಕರು ಏನು ಹೇಳುತ್ತಾರೆ ಎಂದು ಅವರಿಗೇ ಗೊತ್ತಿಲ್ಲ. ನಮ್ಮ ಮನೆಗೆ ಲಗ್ಗೆ ಹಾಕಲು ಪ್ರಯತ್ನ ಮಾಡಿ ಅದರಲ್ಲಿ ಯಶಸ್ವಿಯಾಗಲಿಲ್ಲ. ಮೊದಲು ಅವರ ಪಕ್ಷದೊಳಗೆ ಸರಿ ಮಾಡಿಕೊಳ್ಳಲು ನೋಡಿಕೊಳ್ಳಲಿ. ಕಾಂಗ್ರೆಸ್ ನಲ್ಲಿ ಎಲ್ಲರೂ ಚೆನ್ನಾಗಿದ್ದೇವೆ. ಯಾರ ಮಧ್ಯೆಯೂ ಅಸಮಾಧಾನವಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT