ಡಾ ಜಿ ಪರಮೇಶ್ವರ್ 
ರಾಜಕೀಯ

'ಕೈ ಶಾಸಕರ' ಗಲಾಟೆ ಪ್ರಕರಣ; ನಂಗೇನೂ ಗೊತ್ತಿಲ್ಲ ಎಂದ ಡಿಸಿಎಂ ಪರಮೇಶ್ವರ್!

ಬಳ್ಳಾರಿಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ...

ಬೆಂಗಳೂರು: ಬಳ್ಳಾರಿಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾಧ್ಯಮಗಳಿಂದಲೇ ಗೊತ್ತಾಯಿತು. ನಮ್ಮ ನಾಯಕರ್ಯಾರೂ ಸಂಪರ್ಕಕ್ಕೆ ಸಿಗಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.

ನಗರದ ಹೊರವಲಯದ ಬಿಡದಿ ಸಮೀಪ ಈಗಲ್ಟನ್ ರೆಸಾರ್ಟ್ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ಶಾಸಕರ ಮಧ್ಯೆ ಗಲಾಟೆ ನಡೆದಿರುವ ಬಗ್ಗೆ ಈಗ ತಾನೇ ಮಾಧ್ಯಮಗಳಿಂದ ತಿಳಿದುಕೊಂಡೆ. ನಿನ್ನೆ ರಾತ್ರಿ 8 ಗಂಟೆಯವರೆಗೆ ನಾನು ಕೂಡ ರೆಸಾರ್ಟ್ ನಲ್ಲಿಯೇ ಇದ್ದೆ. ನನ್ನ ಬೇರೆ ಕಾರ್ಯಕ್ರಮವಿದೆ ಎಂದು ಹೊರಹೋಗಿದ್ದೆ. ರಾತ್ರಿ 8 ಗಂಟೆಯಿಂದ ಬೆಳಗ್ಗೆಯವರೆಗೆ ಏನು ನಡೆಯಿತು ಎಂದು ನನಗೆ ಗೊತ್ತಿಲ್ಲ. ಇದೀಗ ಒಳಗೆ ಹೋಗಿ ಮಾಹಿತಿ ಪಡೆದು ನಿಮಗೆ ತಿಳಿಸುತ್ತೇನೆ ಎಂದರು.

ಮಾಧ್ಯಮಗಳಲ್ಲಿ ಸುದ್ದಿ ಬರುತ್ತಿದ್ದಂತೆ ಬೇರೆ ಶಾಸಕರನ್ನು ಸಂಪರ್ಕಿಸಿ ವಿಚಾರಿಸಿದಾಗ ಅವರು ಅಂತಹ ಘಟನೆಗಳು ಏನೂ ನಡೆದಿಲ್ಲ ಎಂದರು. ಇನ್ನು ಸಚಿವ ಡಿ ಕೆ ಶಿವಕುಮಾರ್ ಅವರನ್ನು ಸಂಪರ್ಕಿಸಲೆತ್ನಿಸಿದೆ, ಅವರು ಫೋನ್ ಸಂಪರ್ಕಕ್ಕೆ ಸಿಗಲಿಲ್ಲ ಎಂದರು.

ಬಿಜೆಪಿ ನಾಯಕರು ಏನು ಹೇಳುತ್ತಾರೆ ಎಂದು ಅವರಿಗೇ ಗೊತ್ತಿಲ್ಲ. ನಮ್ಮ ಮನೆಗೆ ಲಗ್ಗೆ ಹಾಕಲು ಪ್ರಯತ್ನ ಮಾಡಿ ಅದರಲ್ಲಿ ಯಶಸ್ವಿಯಾಗಲಿಲ್ಲ. ಮೊದಲು ಅವರ ಪಕ್ಷದೊಳಗೆ ಸರಿ ಮಾಡಿಕೊಳ್ಳಲು ನೋಡಿಕೊಳ್ಳಲಿ. ಕಾಂಗ್ರೆಸ್ ನಲ್ಲಿ ಎಲ್ಲರೂ ಚೆನ್ನಾಗಿದ್ದೇವೆ. ಯಾರ ಮಧ್ಯೆಯೂ ಅಸಮಾಧಾನವಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT