ಡಾ ಜಿ ಪರಮೇಶ್ವರ್ 
ರಾಜಕೀಯ

'ಕೈ ಶಾಸಕರ' ಗಲಾಟೆ ಪ್ರಕರಣ; ನಂಗೇನೂ ಗೊತ್ತಿಲ್ಲ ಎಂದ ಡಿಸಿಎಂ ಪರಮೇಶ್ವರ್!

ಬಳ್ಳಾರಿಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ...

ಬೆಂಗಳೂರು: ಬಳ್ಳಾರಿಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾಧ್ಯಮಗಳಿಂದಲೇ ಗೊತ್ತಾಯಿತು. ನಮ್ಮ ನಾಯಕರ್ಯಾರೂ ಸಂಪರ್ಕಕ್ಕೆ ಸಿಗಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.

ನಗರದ ಹೊರವಲಯದ ಬಿಡದಿ ಸಮೀಪ ಈಗಲ್ಟನ್ ರೆಸಾರ್ಟ್ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ಶಾಸಕರ ಮಧ್ಯೆ ಗಲಾಟೆ ನಡೆದಿರುವ ಬಗ್ಗೆ ಈಗ ತಾನೇ ಮಾಧ್ಯಮಗಳಿಂದ ತಿಳಿದುಕೊಂಡೆ. ನಿನ್ನೆ ರಾತ್ರಿ 8 ಗಂಟೆಯವರೆಗೆ ನಾನು ಕೂಡ ರೆಸಾರ್ಟ್ ನಲ್ಲಿಯೇ ಇದ್ದೆ. ನನ್ನ ಬೇರೆ ಕಾರ್ಯಕ್ರಮವಿದೆ ಎಂದು ಹೊರಹೋಗಿದ್ದೆ. ರಾತ್ರಿ 8 ಗಂಟೆಯಿಂದ ಬೆಳಗ್ಗೆಯವರೆಗೆ ಏನು ನಡೆಯಿತು ಎಂದು ನನಗೆ ಗೊತ್ತಿಲ್ಲ. ಇದೀಗ ಒಳಗೆ ಹೋಗಿ ಮಾಹಿತಿ ಪಡೆದು ನಿಮಗೆ ತಿಳಿಸುತ್ತೇನೆ ಎಂದರು.

ಮಾಧ್ಯಮಗಳಲ್ಲಿ ಸುದ್ದಿ ಬರುತ್ತಿದ್ದಂತೆ ಬೇರೆ ಶಾಸಕರನ್ನು ಸಂಪರ್ಕಿಸಿ ವಿಚಾರಿಸಿದಾಗ ಅವರು ಅಂತಹ ಘಟನೆಗಳು ಏನೂ ನಡೆದಿಲ್ಲ ಎಂದರು. ಇನ್ನು ಸಚಿವ ಡಿ ಕೆ ಶಿವಕುಮಾರ್ ಅವರನ್ನು ಸಂಪರ್ಕಿಸಲೆತ್ನಿಸಿದೆ, ಅವರು ಫೋನ್ ಸಂಪರ್ಕಕ್ಕೆ ಸಿಗಲಿಲ್ಲ ಎಂದರು.

ಬಿಜೆಪಿ ನಾಯಕರು ಏನು ಹೇಳುತ್ತಾರೆ ಎಂದು ಅವರಿಗೇ ಗೊತ್ತಿಲ್ಲ. ನಮ್ಮ ಮನೆಗೆ ಲಗ್ಗೆ ಹಾಕಲು ಪ್ರಯತ್ನ ಮಾಡಿ ಅದರಲ್ಲಿ ಯಶಸ್ವಿಯಾಗಲಿಲ್ಲ. ಮೊದಲು ಅವರ ಪಕ್ಷದೊಳಗೆ ಸರಿ ಮಾಡಿಕೊಳ್ಳಲು ನೋಡಿಕೊಳ್ಳಲಿ. ಕಾಂಗ್ರೆಸ್ ನಲ್ಲಿ ಎಲ್ಲರೂ ಚೆನ್ನಾಗಿದ್ದೇವೆ. ಯಾರ ಮಧ್ಯೆಯೂ ಅಸಮಾಧಾನವಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT