ಮಮತಾ ಬ್ಯಾನರ್ಜಿ ಮತ್ತು ಕುಮಾರಸ್ವಾಮಿ 
ರಾಜಕೀಯ

ದೇಶವನ್ನು ಮುನ್ನಡೆಸುವ ಎಲ್ಲಾ ರೀತಿಯ ಸಾಮರ್ಥ್ಯ ಮಮತಾ ಬ್ಯಾನರ್ಜಿ ಅವರಿಗಿದೆ: ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಿಂದ ದೇಶದ ಜನತೆ ಬೇಸತ್ತಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಉತ್ತಮ ...

ಕೊಲ್ಕೋತಾ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಿಂದ ದೇಶದ ಜನತೆ ಬೇಸತ್ತಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಉತ್ತಮ ಆಡಳಿತಗಾರ್ತಿ, ಹಾಗೂ ದೇಶವನ್ನು ಮುನ್ನಡೆಸುವ ಎಲ್ಲಾ ರೀತಿಯ ಸಾಮರ್ಥ್ಯ ಹೊಂದಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಪಿಟಿಐ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕುಮಾರ ಸ್ವಾಮಿ, 2019ರ ಲೋಕಸಭೆ ಚುನಾವಣೆ ಗೆಲ್ಲಲು ಉತ್ತಮ ನಾಯಕತ್ವ ಬೇಕಾಗಿದೆ, ಪ್ರಚಲಿತ ಸಮಸ್ಯೆಗಳ ಬಗ್ಗೆ ಫೋಕಸ್ ಮಾಡಿ ಮುನ್ನಡೆಸುವಂತ ಸಾಮರ್ಥ್ಯ ಇರುವುದು ಮಮತಾ ಬ್ಯಾನರ್ಜಿ ಅವರಿಗಿದೆ ಎದು ಹೊಗಳಿದ್ದಾರೆ.
ದೇಶದ ಜನತೆ ನರೇಂದ್ರ ಮೋದಿ ಅವರ ಆಡಳಿತದಿಂದಾಗಿ ಅಸಮಾಧಾನಗೊಂಡಿದ್ದಾರೆ. ಹಲವು ರಾಜ್ಯಗಳು ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. 
ಮುಂದಿನ ದಿನಗಳಲ್ಲಿ  ಎಲ್ಲಾ ವಿರೋಧ ಪಕ್ಷಗಳ ನಾಯಕರು ಒಟ್ಟಾಗಿ ಕುರಿತು ಯಾರ ನೇತೃತ್ವದಲ್ಲಿ ಮುಂಬರುವ ಲೋಕಸಭೆ ಚುನಾವಣೆ ಎಂದುರಿಸಬೇಕು ಎಂಬ ಬಗ್ಗೆ ಸಮಾಲೋಚಿಸುತ್ತೇವೆ ಎಂದು ಹೇಳಿದ್ದಾರೆ,
ಮಮತಾ ಬ್ಯಾನರ್ಜಿ ಸರಳತೆಯಲ್ಲಿ ಅತಿ ಸರಳ, ಉತ್ತಮ ಆಡಳಿತಗಾರ್ತಿ, ಪಶ್ಚಿಮ ಬಂಗಾಳದಲ್ಲಿ ಹಲವು ವರ್ಷಗಳ ಕಾಲ ಆಳ್ವಿಕೆ ನಡೆಸಿರುವ ಅವರು ಈಗಾಗಲೇ ಅದನ್ನು ನಿರೂಪಿಸಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT