ಸಿಎಂ ಹೆಚ್ ಡಿ ಕುಮಾರಸ್ವಾಮಿ(ಸಂಗ್ರಹ ಚಿತ್ರ) 
ರಾಜಕೀಯ

ಈಗಲ್ಟನ್ ರೆಸಾರ್ಟ್ ನಲ್ಲಿ ಸಣ್ಣ ಅಚಾತುರ್ಯ ನಡೆದಿರುವುದು ನಿಜ-ಸಿಎಂ ಕುಮಾರಸ್ವಾಮಿ

ಕೆಲ ದಿನಗಳ ಹಿಂದೆ ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ನ ಶಾಸಕರೆಲ್ಲ ಒಟ್ಟುಗೂಡಿದ್ದಾಗ ಒಂದು ಸಣ್ಣ...

ಬೆಂಗಳೂರು: ಕೆಲ ದಿನಗಳ ಹಿಂದೆ ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ನ ಶಾಸಕರೆಲ್ಲ ಒಟ್ಟುಗೂಡಿದ್ದಾಗ ಒಂದು ಸಣ್ಣ ಅಚಾತುರ್ಯ ನಡೆದಿರುವುದು ನಿಜ. ಅಲ್ಲಿ ನಡೆದ ಘಟನೆಗಳ ಬಗ್ಗೆ ಈಗಾಗಲೇ ಮಾಹಿತಿಗಳನ್ನು ಪಡೆದಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ನಾನು ಗಮನಿಸಿದ್ದೇನೆ. ಇವತ್ತು ಆನಂದ್ ಸಿಂಗ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಬೇಕೆಂದಿದ್ದೇನೆ ಎಂದರು.

ಯಾವ ವಿಷಯಗಳನ್ನೂ ಮುಚ್ಚಿಹಾಕಿ ಸರ್ಕಾರವನ್ನು ದುರುಪಯೋಗಪಡಿಸಿಕೊಳ್ಳಲು ನಾನು ಹೋಗುವುದಿಲ್ಲ.  ಕಾನೂನು ವ್ಯಾಪ್ತಿಯೊಳಗೆ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಲು ಈಗಾಗಲೇ ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದೇನೆ. ಈ ವಿಚಾರದಲ್ಲಿ ಯಾವುದೇ ರೀತಿಯಲ್ಲೂ ಯಾರನ್ನೂ ರಕ್ಷಣೆ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.

ಇಲ್ಲಿ ಆಗಬಾರದ ಘಟನೆ ನಡೆದುಹೋಗಿದೆ. ಜನಸಾಮಾನ್ಯರಲ್ಲಿ ಜನಪ್ರತಿಗಳ ಬಗ್ಗೆ ದಿನೇದಿನೇ ಅಪನಂಬಿಕೆಗಳು, ಅವಿಶ್ವಾಸಗಳು ಮೂಡುವಂತಹ ವಾತಾವರಣ ನಿರ್ಮಾಣವಾಗಬಾರದು. ಇದನ್ನು ಯಾವ ರೀತಿ ಸರಿಪಡಿಸಬೇಕು ಎನ್ನುವುದರ ಬಗ್ಗೆ ನಾನು ನನ್ನದೇ ಆದ ವೈಯಕ್ತಿಕ ರೀತಿಯಲ್ಲಿ ಸಮಸ್ಯೆಗಳನ್ನು ತಿಳಿಗೊಳಿಸಲು ಪ್ರಯತ್ನಪಡುತ್ತೇನೆ ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT