ಸಿಎಂ ಹೆಚ್ ಡಿ ಕುಮಾರಸ್ವಾಮಿ(ಸಂಗ್ರಹ ಚಿತ್ರ) 
ರಾಜಕೀಯ

ಈಗಲ್ಟನ್ ರೆಸಾರ್ಟ್ ನಲ್ಲಿ ಸಣ್ಣ ಅಚಾತುರ್ಯ ನಡೆದಿರುವುದು ನಿಜ-ಸಿಎಂ ಕುಮಾರಸ್ವಾಮಿ

ಕೆಲ ದಿನಗಳ ಹಿಂದೆ ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ನ ಶಾಸಕರೆಲ್ಲ ಒಟ್ಟುಗೂಡಿದ್ದಾಗ ಒಂದು ಸಣ್ಣ...

ಬೆಂಗಳೂರು: ಕೆಲ ದಿನಗಳ ಹಿಂದೆ ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ನ ಶಾಸಕರೆಲ್ಲ ಒಟ್ಟುಗೂಡಿದ್ದಾಗ ಒಂದು ಸಣ್ಣ ಅಚಾತುರ್ಯ ನಡೆದಿರುವುದು ನಿಜ. ಅಲ್ಲಿ ನಡೆದ ಘಟನೆಗಳ ಬಗ್ಗೆ ಈಗಾಗಲೇ ಮಾಹಿತಿಗಳನ್ನು ಪಡೆದಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ನಾನು ಗಮನಿಸಿದ್ದೇನೆ. ಇವತ್ತು ಆನಂದ್ ಸಿಂಗ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಬೇಕೆಂದಿದ್ದೇನೆ ಎಂದರು.

ಯಾವ ವಿಷಯಗಳನ್ನೂ ಮುಚ್ಚಿಹಾಕಿ ಸರ್ಕಾರವನ್ನು ದುರುಪಯೋಗಪಡಿಸಿಕೊಳ್ಳಲು ನಾನು ಹೋಗುವುದಿಲ್ಲ.  ಕಾನೂನು ವ್ಯಾಪ್ತಿಯೊಳಗೆ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಲು ಈಗಾಗಲೇ ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದೇನೆ. ಈ ವಿಚಾರದಲ್ಲಿ ಯಾವುದೇ ರೀತಿಯಲ್ಲೂ ಯಾರನ್ನೂ ರಕ್ಷಣೆ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.

ಇಲ್ಲಿ ಆಗಬಾರದ ಘಟನೆ ನಡೆದುಹೋಗಿದೆ. ಜನಸಾಮಾನ್ಯರಲ್ಲಿ ಜನಪ್ರತಿಗಳ ಬಗ್ಗೆ ದಿನೇದಿನೇ ಅಪನಂಬಿಕೆಗಳು, ಅವಿಶ್ವಾಸಗಳು ಮೂಡುವಂತಹ ವಾತಾವರಣ ನಿರ್ಮಾಣವಾಗಬಾರದು. ಇದನ್ನು ಯಾವ ರೀತಿ ಸರಿಪಡಿಸಬೇಕು ಎನ್ನುವುದರ ಬಗ್ಗೆ ನಾನು ನನ್ನದೇ ಆದ ವೈಯಕ್ತಿಕ ರೀತಿಯಲ್ಲಿ ಸಮಸ್ಯೆಗಳನ್ನು ತಿಳಿಗೊಳಿಸಲು ಪ್ರಯತ್ನಪಡುತ್ತೇನೆ ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಲ್ಲಾಳೆ, Video!

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'