ಜಿ ಪರಮೇಶ್ವರ 
ರಾಜಕೀಯ

ಇಂತ ಕೀಳು ಮಟ್ಟದ ರಾಜಕಾರಣ ಎಂದು ನೋಡಿಲ್ಲ: ಕಾಂಗ್ರೆಸ್ ಶಾಸಕರ ಹೊಡೆದಾಟ ಕುರಿತು ಪರಮೇಶ್ವರ್

ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರ ಹೊಡೆದಾಟದ ಕುರಿತಂತೆ ಬೇಸರ ವ್ಯಕ್ತಪಡಿಸಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು 30 ವರ್ಷಗಳ ನನ್ನ ರಾಜಕೀಯ...

ಬೆಂಗಳೂರು: ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರ ಹೊಡೆದಾಟದ ಕುರಿತಂತೆ ಬೇಸರ ವ್ಯಕ್ತಪಡಿಸಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು 30 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ಇಂತಹ ಕೀಳುಮಟ್ಟದ ಘಟನೆ ನೋಡಿಲ್ಲ ಎಂದು ಹೇಳಿದ್ದಾರೆ.
ಬಿಡದಿಯ ಈಗಲ್ಟನ್ ರೆಸಾರ್ಟ್‌ನಲ್ಲಿ ಶಾಸಕರಾದ ಆನಂದ್ ಸಿಂಗ್, ಗಣೇಶ್ ಕಿತ್ತಾಟದ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಯುವಕರಿಗೆ ರಾಜಕಾರಣಕ್ಕೆ ಬನ್ನಿ ಎಂದು ಹೇಳುವ ಹಿರಿಯ ರಾಜಕಾರಣಿಗಳಾದ ನಾವುಗಳು ಆದರ್ಶ ಪಾಲಿಸದೇ ಹೋದರೆ ಹೇಗೆ?. ಯುವಕರಿಗೆ ನಾವು ಏನು ಹೇಳಬೇಕು?" ಎಂದು ಪ್ರಶ್ನಿಸಿದರು.
ಗಣೇಶ್ ಯುವ ರಾಜಕಾರಣಿಯಾಗಿದ್ದುಕೊಂಡು ಹೀಗೆ ಮಾಡಿದ್ದಾರೆ. ಆನಂದ್ ಸಿಂಗ್ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಸೂಕ್ತ ಕ್ರಮಕೈಗೊಳ್ಳುತ್ತಾರೆ. ಪಕ್ಷದಿಂದ ಗಣೇಶ್ ಅವರನ್ನು ಅಮಾನತು ಮಾಡಿ, ಘಟನೆ ಬಗ್ಗೆ ತನಿಖೆ ಮಾಡಲು ತಮ್ಮ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT