ಪ್ರಿಯಾಂಕ್ ಖರ್ಗೆ 
ರಾಜಕೀಯ

ಶೋಕಾಚರಣೆ ನಡುವೆ ಕಾರ್ಯಕ್ರಮ: ಸಚಿವ ಪ್ರಿಯಾಂಕ್ ಖರ್ಗೆಗೆ ವೇಣುಗೋಪಾಲ್ ತರಾಟೆ

ಸಿದ್ಧಗಂಗಾ ಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನ ಶೋಕಾಚರಣೆಯ ಆದೇಶ ಹೊರಡಿಸಿದರೂ ಖಾಸಗಿ ಹೋಟೆಲಿನಲ್ಲಿ ಅದ್ಧೂರಿ...

ಬೆಂಗಳೂರು: ಸಿದ್ಧಗಂಗಾ ಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನ ಶೋಕಾಚರಣೆಯ ಆದೇಶ ಹೊರಡಿಸಿದರೂ ಖಾಸಗಿ ಹೋಟೆಲಿನಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಿದ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ 'ಸಮಾನತೆ ಅನ್ವೇಷಣೆ -ಸಂವಿಧಾನ ಸಂಭಾಷಣೆ' ಕಾರ್ಯಕ್ರಮವನ್ನು ಆಯೋಜಿಸಿತು. 
ಶೋಕಾಚರಣೆಯಿದ್ದರೂ ಕಾರ್ಯಕ್ರಮ ನಡೆಸಿದ ಪ್ರಿಯಾಂಕ್ ಖರ್ಗೆ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ವಿವಿಧ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸಚಿವರ ವರ್ತನೆಗೆ ಆಕ್ಷೇಪ ವ್ಯೆಕ್ತಪಡಿಸಿದ್ದರು.
ಈ ವಿಚಾರ ಹೈಕಮಾಂಡ್ ಅಂಗಳಕ್ಕೆ ತಲುಪಿತ್ತು. ಹೀಗಾಗಿ ಬೆಳ್ಳಂಬೆಳಗ್ಗೆ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಕೆ.ಸಿ.ವೇಣುಗೋಪಾಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಯುಎನ್ಐಗೆ ಕೆಪಿಸಿಸಿ ಮೂಲಗಳಿಂದ ತಿಳಿದುಬಂದಿದೆ.
ಯಾವ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬ ಸಾಮಾನ್ಯ ಜ್ಞಾನ ನಿಮಗೆ ಇಲ್ಲದೇ ಹೋಯ್ತೇ? ಸಿದ್ದಗಂಗಾ ಶ್ರೀಗಳಂತ ಸಾಧಕರು ಅಗಲಿದಾಗ ಈ ಕಾರ್ಯಕ್ರಮ ನಡೆಸಿ ವಿವಾದ ಮಾಡಿಕೊಳ್ಳಬೇಕಾದ ಅವಶ್ಯಕತೆ ಏನಿತ್ತು? ಈ ವಿಚಾರಗಳು ಭಾವನಾತ್ಮಕವಾದ ವಿಷಯಗಳು ಎನ್ನುವುದು ನಿಮಗೆ ಗೊತ್ತಾಗುದಿಲ್ಲವೇ? ಇದರಿಂದ ಆಗುವ ಪರಿಣಾಮಗಳೇನು ಅಂತ ಯೋಚಿಸುವ ಶಕ್ತಿಯು ನಿಮಗಿಲ್ಲವೇ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ಉಲ್ಲೇಖಿಸಿವೆ. ಅಷ್ಟೇ ಅಲ್ಲದೇ ಈ ವಿಚಾರವಾಗಿ ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಪ್ರಿಯಾಂಕ್ ಖರ್ಗೆಗೆ ಸೂಚನೆಯನ್ನು ಕೂಡ ವೇಣುಗೋಪಾಲ್ ನೀಡಿದ್ದಾರೆ.
ಮಂಗಳವಾರ ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನ ಲಿಂಗೈಕ್ಯರಾದ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಕಾರ್ಯಕ್ರಮವನ್ನು ಮುಂದುವರಿಸಲಾಯಿತು. ಇಡೀ ರಾಜ್ಯವೇ ಶೋಕಾಚರಣೆ ಮಾಡುತ್ತಿರುವಾಗ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ತಪ್ಪು ಎಂದು ಬಿಜೆಪಿ ಆಕ್ಷೇಪಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT