ವಿಧಾನಸೌಧ 
ರಾಜಕೀಯ

ವಿಧಾನ ಪರಿಷತ್ ನಾಮನಿರ್ದೇಶಿತ ಸದಸ್ಯನಾಗಿ ಜೆಡಿಎಸ್ ನ ತಿಪ್ಪೇಸ್ವಾಮಿ ನೇಮಕ

ವಿಧಾನ ಪರಿಷತ್ ನಾಮನಿರ್ದೇಶಿತ ಸದಸ್ಯ ಸ್ಥಾನಕ್ಕೆ ಜೆಡಿಎಸ್ ನಿವೃತ್ತ ಕೆಎಎಸ್‌ ಅಧಿಕಾರಿ ತಿಪ್ಪೇಸ್ವಾಮಿ ಅವರನ್ನು ಶುಕ್ರವಾರ ನೇಮಕ ಮಾಡಿದೆ.

ಬೆಂಗಳೂರು: ವಿಧಾನ ಪರಿಷತ್ ನಾಮನಿರ್ದೇಶಿತ ಸದಸ್ಯ ಸ್ಥಾನಕ್ಕೆ ಜೆಡಿಎಸ್ ನಿವೃತ್ತ ಕೆಎಎಸ್‌ ಅಧಿಕಾರಿ ತಿಪ್ಪೇಸ್ವಾಮಿ ಅವರನ್ನು ಶುಕ್ರವಾರ ನೇಮಕ ಮಾಡಿದೆ.
ತಿಪ್ಪೇಸ್ವಾಮಿ ಅವರು, ದೋಸ್ತಿ ಸರ್ಕಾರದಲ್ಲಿ ಪ್ರಭಾವಿಯಾಗಿರುವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ವಿಶೇಷಾಧಿಕಾರಿಯಾಗಿದ್ದು, ಅವರನ್ನು ಮೇಲ್ಮನೆಗೆ ಕಳಿಸುವಂತೆ ರೇವಣ್ಣ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮೇಲೆ ತೀವ್ರ ಒತ್ತಡ ತಂದಿದ್ದರು. 
ಮೂಲತಃ ಹಾಸನದವರಾದ ತಿಪ್ಪೇಸ್ವಾಮಿ, ಹೆಚ್.ಡಿ. ದೇವೇಗೌಡ ಪ್ರಧಾನಿಯಾಗಿದ್ದಂತಹ ಸಂದರ್ಭದಲ್ಲಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದರು. 
ಕೆಲವು ದಿನಗಳ ಹಿಂದೆ ತಿಪ್ಪೇಸ್ವಾಮಿ ಅವರ ಹೆಸರನ್ನು ಶಿಫಾರಸು ಮಾಡಿ ರಾಜ್ಯಪಾಲ ವಿ.ಆರ್.ವಾಲಾ ಅವರಿಗೆ ಕಳುಹಿಸಿಕೊಡಲಾಗಿತ್ತು. 
ವಿಧಾನಪರಿಷತ್ತಿನ ನಾಮನಿರ್ದೇಶಿತ ಸದಸ್ಯರಾಗಿ ಜೆಡಿಎಸ್‌ನಿಂದ ತಿಪ್ಪೇಸ್ವಾಮಿ ಅವರನ್ನು ನೇಮಕ ಮಾಡಲು ಶಿಫಾರಸು ಮಾಡಿರುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT