ಎಚ್.ಡಿ ರೇವಣ್ಣ ಮತ್ತು ಪ್ರೀತಮ್ ಗೌಡ 
ರಾಜಕೀಯ

ಹಾಸನ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಚ್.ಡಿ ರೇವಣ್ಣ- ಪ್ರೀತಮ್ ಗೌಡ ಮಾತಿನ ಚಕಮಕಿ

ರಸ್ತೆ ಅಗಲೀಕರಣದ ವೇಳೆ ಕೆಲವು ಕಟ್ಟಡಗಳನ್ನು ಒಡೆದಿರುವುದಕ್ಕೆ ಶಾಸಕ ಪ್ರೀತಮ್ ಗೌಡ ಮತ್ತು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ...

ಹಾಸನ : ರಸ್ತೆ ಅಗಲೀಕರಣದ ವೇಳೆ ಕೆಲವು ಕಟ್ಟಡಗಳನ್ನು ಒಡೆದಿರುವುದಕ್ಕೆ ಶಾಸಕ ಪ್ರೀತಮ್ ಗೌಡ ಮತ್ತು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ನಡುವೆ ಗಣ ರಾಜ್ಯೋತ್ಸವ ವೇದಿಕೆಯಲ್ಲೇ ಮಾತಿನ ಚಕಮಕಿ ನಡೆದಿದೆ.
ಕಾರ್ಯಕ್ರಮದ ನಡುವೆ ರೇವಣ್ಣ ಅವರ ಬಳಿ  ಪ್ರೀತಮ್ ಗೌಡ ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿಗೆ ಸಂಬಂಧಪಟ್ಟಂತೆ ಮಾತುಕತೆ ಆರಂಭಿಸಿದರು. ಬಿಜೆಪಿ ಬೆಂಬಲಿಗರ ಕಟ್ಟಡಗಳಲ್ಲಿ ಹೆಚ್ಚಾಗಿ ಒಡೆದು ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ನಿಟ್ಟಿನಲ್ಲಿ ಪ್ರೀತಮ್ ಗೌಡ ತೀವ್ರ ಅಸಮಾಧಾನಗೊಂಡಿದ್ದರು. ತಾವು ಊರಿನಲ್ಲಿ ಇಲ್ಲದ ವೇಳೆಯಲ್ಲಿ ಕಾರ್ಯಾಚರಣೆ ನಡೆಸಿ ಬಿಜೆಪಿ ಬೆಂಬಲಿಗರ ಕಟ್ಟಡಗಳನ್ನು ಒಡೆದಿದ್ದಕ್ಕಾಗಿ ಪ್ರೀತಮ್ ಗೌಡ, ರೇವಣ್ಣ ಅವರ ಜೊತೆ ವಾಗ್ವಾದಕ್ಕೆ ಮುಂದಾದರು.
ಆದರೆ ಇದಕ್ಕೂ,ತಮಗೂ ಸಂಬಂಧವಿಲ್ಲ.  ಹೈಕೋರ್ಟ್ ಆದೇಶದಂತೆ ಜಿಲ್ಲಾಧಿಕಾರಿ ಅವರು ರೋಹಿಣಿ ಸಿಂಧೂರಿ ಕಾರ್ಯಾಚರಣೆ ನಡೆಸಿದ್ದಾರೆ. ನೀವು ಅವರ ಬಳಿ ಮಾತನಾಡಿ ಎಂದು ರೇವಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ವಿಷಯವಾಗಿ ಇಬ್ಬರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆದಿದೆ.
ನಂತರ ವಿಧಾನಸಭೆಯಲ್ಲಿ ರೇವಣ್ಣ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಪ್ರೀತಮ್ ಗೌಡ ಹೇಳಿದ್ದಾರೆ, ಇದಕ್ಕೆ ಪ್ರತಿಕ್ರಿಯಿಸಿದ ರೇವಣ್ಣ, ವಿಧಾನಸಭೆಯಲ್ಲಿ ಉತ್ತರಿಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT