ಎಚ್.ಡಿ ರೇವಣ್ಣ ಮತ್ತು ಪ್ರೀತಮ್ ಗೌಡ 
ರಾಜಕೀಯ

ಹಾಸನ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಚ್.ಡಿ ರೇವಣ್ಣ- ಪ್ರೀತಮ್ ಗೌಡ ಮಾತಿನ ಚಕಮಕಿ

ರಸ್ತೆ ಅಗಲೀಕರಣದ ವೇಳೆ ಕೆಲವು ಕಟ್ಟಡಗಳನ್ನು ಒಡೆದಿರುವುದಕ್ಕೆ ಶಾಸಕ ಪ್ರೀತಮ್ ಗೌಡ ಮತ್ತು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ...

ಹಾಸನ : ರಸ್ತೆ ಅಗಲೀಕರಣದ ವೇಳೆ ಕೆಲವು ಕಟ್ಟಡಗಳನ್ನು ಒಡೆದಿರುವುದಕ್ಕೆ ಶಾಸಕ ಪ್ರೀತಮ್ ಗೌಡ ಮತ್ತು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ನಡುವೆ ಗಣ ರಾಜ್ಯೋತ್ಸವ ವೇದಿಕೆಯಲ್ಲೇ ಮಾತಿನ ಚಕಮಕಿ ನಡೆದಿದೆ.
ಕಾರ್ಯಕ್ರಮದ ನಡುವೆ ರೇವಣ್ಣ ಅವರ ಬಳಿ  ಪ್ರೀತಮ್ ಗೌಡ ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿಗೆ ಸಂಬಂಧಪಟ್ಟಂತೆ ಮಾತುಕತೆ ಆರಂಭಿಸಿದರು. ಬಿಜೆಪಿ ಬೆಂಬಲಿಗರ ಕಟ್ಟಡಗಳಲ್ಲಿ ಹೆಚ್ಚಾಗಿ ಒಡೆದು ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ನಿಟ್ಟಿನಲ್ಲಿ ಪ್ರೀತಮ್ ಗೌಡ ತೀವ್ರ ಅಸಮಾಧಾನಗೊಂಡಿದ್ದರು. ತಾವು ಊರಿನಲ್ಲಿ ಇಲ್ಲದ ವೇಳೆಯಲ್ಲಿ ಕಾರ್ಯಾಚರಣೆ ನಡೆಸಿ ಬಿಜೆಪಿ ಬೆಂಬಲಿಗರ ಕಟ್ಟಡಗಳನ್ನು ಒಡೆದಿದ್ದಕ್ಕಾಗಿ ಪ್ರೀತಮ್ ಗೌಡ, ರೇವಣ್ಣ ಅವರ ಜೊತೆ ವಾಗ್ವಾದಕ್ಕೆ ಮುಂದಾದರು.
ಆದರೆ ಇದಕ್ಕೂ,ತಮಗೂ ಸಂಬಂಧವಿಲ್ಲ.  ಹೈಕೋರ್ಟ್ ಆದೇಶದಂತೆ ಜಿಲ್ಲಾಧಿಕಾರಿ ಅವರು ರೋಹಿಣಿ ಸಿಂಧೂರಿ ಕಾರ್ಯಾಚರಣೆ ನಡೆಸಿದ್ದಾರೆ. ನೀವು ಅವರ ಬಳಿ ಮಾತನಾಡಿ ಎಂದು ರೇವಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ವಿಷಯವಾಗಿ ಇಬ್ಬರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆದಿದೆ.
ನಂತರ ವಿಧಾನಸಭೆಯಲ್ಲಿ ರೇವಣ್ಣ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಪ್ರೀತಮ್ ಗೌಡ ಹೇಳಿದ್ದಾರೆ, ಇದಕ್ಕೆ ಪ್ರತಿಕ್ರಿಯಿಸಿದ ರೇವಣ್ಣ, ವಿಧಾನಸಭೆಯಲ್ಲಿ ಉತ್ತರಿಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT