ಸುದ್ದಿಗಾರರೊಂದಿಗೆ ಸಿದ್ದರಾಮಯ್ಯ 
ರಾಜಕೀಯ

ನಮ್ಮ ಶಾಸಕರನ್ನು ನಾವೇ ಕಂಟ್ರೋಲ್​​ ಮಾಡೋದು; ಜೆಡಿಎಸ್​​ ಮಾಡುತ್ತಾ?; ಸಿದ್ದರಾಮಯ್ಯ ತಿರುಗೇಟು

ನಮ್ಮ ಶಾಸಕರನ್ನು ನಾವೇ ಕಂಟ್ರೋಲ್​ ಮಾಡೋದು.. ಇನ್ನೇನು ಜೆಡಿಎಸ್ ಪಕ್ಷ​​ ಮಾಡಲು ಸಾಧ್ಯವೇ...? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು: ನಮ್ಮ ಶಾಸಕರನ್ನು ನಾವೇ ಕಂಟ್ರೋಲ್​ ಮಾಡೋದು.. ಇನ್ನೇನು ಜೆಡಿಎಸ್ ಪಕ್ಷ​​ ಮಾಡಲು ಸಾಧ್ಯವೇ...? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಶಾಸಕರ ಸಿದ್ದರಾಮಯ್ಯ ಅವರೇ ನಮ್ಮ ಸಿಎಂ ಹೇಳಿಕೆ, ಗರಂ ಆಗಿದ್ದ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ನೀಡಿದ್ದ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು,'ನಾವೇ ಮೈತ್ರಿ ಸರ್ಕಾರ ರಚಿಸಿದ್ದೇವೆ. ಜೆಡಿಎಸ್ ನವರೇ ಸಿಎಂ ಆಗಲೀ ಎಂದು ಹೇಳಿ ಅದರಂತೆ ನಡೆದುಕೊಂಡಿದ್ದೇವೆ. ಇನ್ನು ನಾನು ಸಿಎಂ ಆಗೋ ಪ್ರಶ್ನೆ ಎಲ್ಲಿಂದ ಬಂತು? ಎಂದು ಪ್ರಶ್ನಿಸಿದ್ದಾರೆ.
'ನನಗೆ ಸಿಎಂ ಎಚ್​​ಡಿ ಕುಮಾರಸ್ವಾಮಿಯವರ ರಾಜೀನಾಮೆ ವಿಚಾರ ಗೊತ್ತಿಲ್ಲ. ನಾನು ಈ ಬಗ್ಗೆ ಚರ್ಚೆ ಮಾಡ್ತಿನಿ. ಎಸ್.ಟಿ ಸೋಮಶೇಖರ್‌ಗೆ ಕೆಪಿಸಿಸಿಯಿಂದ ನೋಟೀಸ್ ನೀಡುವ ಬಗ್ಗೆಯೂ ಯಾವುದೇ ಮಾಹಿತಿ ಇಲ್ಲ.  ಎಲ್ಲರ ಜೊತೆ ಮಾತನಾಡಿ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು. ಇದೇ ವೇಳೆ 'ನಮ್ಮ ಶಾಸಕರನ್ನು ನಾವೇ ಕಂಟ್ರೋಲ್ ಮಾಡಬೇಕು. ಇನ್ನೇನು ಜೆ.ಡಿ.ಎಸ್ ಅವರು ಕಂಟ್ರೋಲ್ ಮಾಡೋಕ್ ಆಗುತ್ತಾ..? ಭಿನ್ನಾಭಿಪ್ರಾಯ ಅಥವಾ ಸಮಸ್ಯೆ ಕೇವಲ ಮಾಧ್ಯಮಗಳ ಸೃಷ್ಟಿ.. ಈ ಬಗ್ಗೆ ಕುಮಾರಸ್ವಾಮಿ ಜೊತೆ ಮಾತುನಾಡುತ್ತೇನೆ ಎಂದು ಹೇಳಿದರು.
ಭಿನ್ನಾಭಿಪ್ರಾಯಗೆಳಲ್ಲವೂ ಮಾಧ್ಯಮಗಳ ಸೃಷ್ಟಿ
ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ನೀವೆ ಗೊಂದಲ ಸೃಷ್ಟಿಸುತ್ತಿದ್ದೀರಿ.  ನೀವೆ ಒಬ್ಬೊಬ್ಬರ ಬಳಿ ಒಂದೊಂದು ಹೇಳಿಕೆ ಪಡೆದು ಗೊಂದಲ ಸೃಷ್ಟಿಸುತ್ತಿದ್ದೀರಿ. ಪದೇ ಪದೇ ಅದನ್ನ ಕೇಳಬೇಡಿ. ಇದಕ್ಕೆ ಈಗಾಗಲೆ ಉತ್ತರ ನೀಡಾಗಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT