ದಿನೇಶ್ ಗುಂಡೂರಾವ್ 
ರಾಜಕೀಯ

ಎಸ್ ಟಿ ಸೇಮಶೇಖರ್ ಗೆ ಕೆಪಿಸಿಸಿಯಿಂದ ಶೋಕಾಸ್ ನೊಟೀಸ್-ದಿನೇಶ್ ಗುಂಡೂರಾವ್

ಶಾಸಕ ಎಸ್ ಟಿ ಸೋಮಶೇಖರ್ ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಕಾರಣ ಕೇಳಿ ಅವರಿಗೆ ...

ಬೆಂಗಳೂರು: ಶಾಸಕ ಎಸ್ ಟಿ ಸೋಮಶೇಖರ್ ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಕಾರಣ ಕೇಳಿ ಅವರಿಗೆ ಶೋಕಾಸ್ ನೊಟೀಸ್ ಜಾರಿ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗಲು ನಾವು ಬಯಸುತ್ತಿದ್ದೇವೆ. ಮೈತ್ರಿ ಸರ್ಕಾರದ ಆಡಳಿತದಲ್ಲಿ ಬೆಂಗಳೂರಿನ ಅಭಿವೃದ್ಧಿಯ ಕೆಲಸಗಳು ಕುಂಠಿತವಾಗಿವೆ ಎಂದು ಶಾಸಕ ಸೋಮಶೇಖರ್ ನೀಡಿರುವ ಹೇಳಿಕೆಗೆ ದಿನೇಶ್ ಗುಂಡೂರಾವ್ ಗರಂ ಆಗಿದ್ದಾರೆ.

ಪಕ್ಷದ ಯಾವುದೇ ಶಾಸಕರು ಬಹಿರಂಗವಾಗಿ ಹೇಳಿಕೆಗಳನ್ನು ನೀಡಬಾರದು, ಅದನ್ನು ನಾವು ಒಪ್ಪುವುದಿಲ್ಲ. ಅವರಿಗೆ ಏನಾದರೂ ಸಮಸ್ಯೆಗಳಿದ್ದರೆ ಅದನ್ನು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರಲ್ಲಿ ಚರ್ಚೆ ನಡೆಸಬೇಕಿತ್ತು. ಮೈತ್ರಿ ಸರ್ಕಾರದಲ್ಲಿ ಏನೇ ಸಮಸ್ಯೆಗಳಿದ್ದರೂ ನಮ್ಮ ಬಳಿ ಬಂದು ಚರ್ಚೆ ಮಾಡಬೇಕು. ಅದು ಬಿಟ್ಟು ಬಹಿರಂಗವಾಗಿ ಈ ರೀತಿ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದರು.

ಎಸ್ ಟಿ ಸೋಮಶೇಖರ್ ಅವರ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ, ಅದು ಶಿಸ್ತನ್ನು ಮೀರುವ ಹೇಳಿಕೆ. ಮೈತ್ರಿ ಸರ್ಕಾರ ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಗಮನಹರಿಸಿದೆ. ಹಲವು ಯೋಜನೆಗಳನ್ನು ಪ್ರಕಟಿಸಿ ಕೋಟ್ಯಂತರ ರೂಪಾಯಿ ಮೀಸಲಿಟ್ಟಿದೆ. ಇಂತಹ ಸಂದರ್ಭದಲ್ಲಿ ಸೋಮಶೇಖರ್ ಅವರು ಈ ರೀತಿ ಹೇಳಿಕೆ ಏಕೆ ಕೊಟ್ಟಿದ್ದಾರೆ ಎಂದು ಕಾರಣ ಕೇಳಿ ಶೋಕಾಸ್ ನೊಟೀಸ್ ನೀಡಲಾಗುವುದು, ಅವರ ಉತ್ತರ ಅಸಮರ್ಪಕವಾಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT