ದಿನೇಶ್ ಗುಂಡೂರಾವ್ 
ರಾಜಕೀಯ

ಎಸ್ ಟಿ ಸೇಮಶೇಖರ್ ಗೆ ಕೆಪಿಸಿಸಿಯಿಂದ ಶೋಕಾಸ್ ನೊಟೀಸ್-ದಿನೇಶ್ ಗುಂಡೂರಾವ್

ಶಾಸಕ ಎಸ್ ಟಿ ಸೋಮಶೇಖರ್ ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಕಾರಣ ಕೇಳಿ ಅವರಿಗೆ ...

ಬೆಂಗಳೂರು: ಶಾಸಕ ಎಸ್ ಟಿ ಸೋಮಶೇಖರ್ ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಕಾರಣ ಕೇಳಿ ಅವರಿಗೆ ಶೋಕಾಸ್ ನೊಟೀಸ್ ಜಾರಿ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗಲು ನಾವು ಬಯಸುತ್ತಿದ್ದೇವೆ. ಮೈತ್ರಿ ಸರ್ಕಾರದ ಆಡಳಿತದಲ್ಲಿ ಬೆಂಗಳೂರಿನ ಅಭಿವೃದ್ಧಿಯ ಕೆಲಸಗಳು ಕುಂಠಿತವಾಗಿವೆ ಎಂದು ಶಾಸಕ ಸೋಮಶೇಖರ್ ನೀಡಿರುವ ಹೇಳಿಕೆಗೆ ದಿನೇಶ್ ಗುಂಡೂರಾವ್ ಗರಂ ಆಗಿದ್ದಾರೆ.

ಪಕ್ಷದ ಯಾವುದೇ ಶಾಸಕರು ಬಹಿರಂಗವಾಗಿ ಹೇಳಿಕೆಗಳನ್ನು ನೀಡಬಾರದು, ಅದನ್ನು ನಾವು ಒಪ್ಪುವುದಿಲ್ಲ. ಅವರಿಗೆ ಏನಾದರೂ ಸಮಸ್ಯೆಗಳಿದ್ದರೆ ಅದನ್ನು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರಲ್ಲಿ ಚರ್ಚೆ ನಡೆಸಬೇಕಿತ್ತು. ಮೈತ್ರಿ ಸರ್ಕಾರದಲ್ಲಿ ಏನೇ ಸಮಸ್ಯೆಗಳಿದ್ದರೂ ನಮ್ಮ ಬಳಿ ಬಂದು ಚರ್ಚೆ ಮಾಡಬೇಕು. ಅದು ಬಿಟ್ಟು ಬಹಿರಂಗವಾಗಿ ಈ ರೀತಿ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದರು.

ಎಸ್ ಟಿ ಸೋಮಶೇಖರ್ ಅವರ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ, ಅದು ಶಿಸ್ತನ್ನು ಮೀರುವ ಹೇಳಿಕೆ. ಮೈತ್ರಿ ಸರ್ಕಾರ ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಗಮನಹರಿಸಿದೆ. ಹಲವು ಯೋಜನೆಗಳನ್ನು ಪ್ರಕಟಿಸಿ ಕೋಟ್ಯಂತರ ರೂಪಾಯಿ ಮೀಸಲಿಟ್ಟಿದೆ. ಇಂತಹ ಸಂದರ್ಭದಲ್ಲಿ ಸೋಮಶೇಖರ್ ಅವರು ಈ ರೀತಿ ಹೇಳಿಕೆ ಏಕೆ ಕೊಟ್ಟಿದ್ದಾರೆ ಎಂದು ಕಾರಣ ಕೇಳಿ ಶೋಕಾಸ್ ನೊಟೀಸ್ ನೀಡಲಾಗುವುದು, ಅವರ ಉತ್ತರ ಅಸಮರ್ಪಕವಾಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT