ಸಂಗ್ರಹ ಚಿತ್ರ 
ರಾಜಕೀಯ

ಆಕೆ ನನ್ನ ತಂಗಿ ಇದ್ದಂತೆ, ಅದೊಂದು ಆಕಸ್ಮಿಕ ಘಟನೆಯಷ್ಟೇ ದುರ್ವರ್ತನೆ ಅಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನೆ ಸಂಬಂಥ ಸ್ಪಷ್ಟನೆ ನೀಡಿದ್ದು, ಆಕೆ ನನ್ನ ತಂಗಿ ಇದ್ದಂತೆ, ಅದೊಂದು ಆಕಸ್ಮಿಕ ಘಟನೆಯಷ್ಟೇ ದುರ್ವರ್ತನೆ ಅಲ್ಲ ಎಂದು ಹೇಳಿದ್ದಾರೆ.

ಮೈಸೂರು: ಮೈಸೂರಿನ ವರುಣಾ ಕ್ಷೇತ್ರದಲ್ಲಿ ಜನರ ಸಮಸ್ಯೆ ಆಲಿಸುತ್ತಿದ್ದ ವೇಳೆ ತಮ್ಮನ್ನು ಪ್ರಶ್ನಿಸಿದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಆಕ್ರೋಶಕ್ಕೆ ತುತ್ತಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನೆ ಸಂಬಂಥ ಸ್ಪಷ್ಟನೆ ನೀಡಿದ್ದು, ಆಕೆ ನನ್ನ ತಂಗಿ ಇದ್ದಂತೆ, ಅದೊಂದು ಆಕಸ್ಮಿಕ ಘಟನೆಯಷ್ಟೇ ದುರ್ವರ್ತನೆ ಅಲ್ಲ ಎಂದು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಕೆಯನ್ನು ನಾನು ಕಳೆದ 15 ವರ್ಷಗಳಿಂದ ಬಲ್ಲೆ. ಆಕೆ ನನ್ನ ಸಹೋದರಿ ಇದ್ದಂತೆ. ಅದೊಂದು ಆಕಸ್ಮಿಕ ಘಟನೆಯಷ್ಟೇ.. ದುರ್ವರ್ತನೆ ಅಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 
ಸಿದ್ದರಾಮಯ್ಯ ಅವರು ನಿನ್ನೆ ಮೈಸೂರಿನ ಟಿ.ನರಸೀಪುರದ ಗರ್ಗೇಶ್ವರ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ವೇಳೆ, ಮಾಜಿ ತಾ.ಪಂ. ಉಪಾಧ್ಯಕ್ಷೆ ಹಾಗೂ ಕಾಂಗ್ರೆಸ್​​ನ ಕಾರ್ಯಕರ್ತೆ ಜಮಾಲಾರ್ ಅವರು ನಮ್ಮ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ, ನೀವೂ ಕೈಗೆ ಸಿಗಲ್ಲ. ಶಾಸಕರಾಗಿರುವ ನಿಮ್ಮ ಮಗನೂ ಕೈಗೆ ಸಿಗಲ್ಲ. ನಮ್ಮ ಸಮಸ್ಯೆಯನ್ನು ಯಾರಿಗೆ ಹೇಳೋಣ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದರು. ಅಲ್ಲದೆ ಮೇಜನ್ನು ಕುಟ್ಟಿ ಆಕ್ರೋಶಭರಿತರಾಗಿ ಮಾತನಾಡಿದ್ದರು. ಇದನ್ನು ಕಂಡು ಆಕ್ರೋಶಗೊಂಡ ಸಿದ್ಧರಾಮಯ್ಯ ಅವರು ಮಹಿಳೆಯ ಕೈಯಲ್ಲಿದ್ದ ಮೈಕನ್ನು ಕಿತ್ತುಕೊಂಡು, ‘ಕೂತ್ಕೋಳಮ್ಮ ಸಾಕು.. ನನ್ನ ಮುಂದೇನೆ ಟೇಬಲ್ ಕುಟ್ಟುತ್ತೀಯಾ… ದೇಶಕ್ಕೆ ಅನ್ಯಾಯ ಮಾಡಿರೋ ತರ ಮಾತಾಡ್ತೀಯಲ್ಲಾ…?’ ಎಂದು ಗದರಿಸಿದ್ದು, ಅದರ ವಿಡಿಯೋ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT