ಎಚ್.ಡಿ ಕುಮಾರಸ್ವಾಮಿ ಮತ್ತು ಸಿ.ಎಸ್ ಪುಟ್ಟರಾಜು 
ರಾಜಕೀಯ

ಪ್ರಬುದ್ಧ ಆಡಳಿತದಲ್ಲಿ ಸಿಎಂ ಕುಮಾರಸ್ವಾಮಿ ಪಿಎಚ್‌ಡಿ: ಕಾಂಗ್ರೆಸ್ ಗೆ ಸಿ.ಎಸ್ ಪುಟ್ಟರಾಜು ಟಾಂಗ್

ಸಮ್ಮಿಶ್ರ ಸರ್ಕಾರ ಹಾಗೂ ಪ್ರಬುದ್ಧ ಆಡಳಿತ ನಡೆಸುವುದರಲ್ಲಿ ಮುಖ್ಯಮಂತ್ರಿ ಎಚ್‌. ಡಿ ಕುಮಾರಸ್ವಾಮಿ ಪಿಎಚ್ ಡಿ ಪಡೆದಿದ್ದಾರೆ ಎಂದು ಸಚಿವ ಸಿಎಸ್‌ ಪುಟ್ಟರಾಜು ..

ಬೆಂಗಳೂರು: ಸಮ್ಮಿಶ್ರ ಸರ್ಕಾರ ಹಾಗೂ ಪ್ರಬುದ್ಧ ಆಡಳಿತ ನಡೆಸುವುದರಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪಿಎಚ್ ಡಿ ಪಡೆದಿದ್ದಾರೆ ಎಂದು ಸಚಿವ ಸಿಎಸ್‌ ಪುಟ್ಟರಾಜು ತಿರುಗೇಟು ನೀಡಿದ್ದಾರೆ.  
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಮುಖ್ಯಮಂತ್ರಿ ಕುಮಾರ ಸ್ವಾಮಿಗೆ ಮೆಚ್ಯುರಿಟಿ ಇಲ್ಲ ಎಂದು ಹೇಳಿಕೆ ನೀಡಿರುವ ಮಾಜಿ ಸಚಿವ ಬಸವರಾಜ ರಾಯ ರೆಡ್ಡಿ ವಿರುದ್ಧ ಹರಿ ಹಾಯ್ದಿದ್ದಾರೆ. ರಾಯರೆಡ್ಡಿ ಮೊದಲು ತಮ್ಮ ಮೂಲ ಯಾವುದು ಎಂಬುದನ್ನು ಅರಿತು ಮಾತನಾಡಲಿ ಎಂದು ಕಿಡಿ ಕಾರಿದ್ದಾರೆ.
ದೆಹಲಿಯ ವಿಶೇಷ ಪ್ರತಿನಿಧಿಯಾಗಿ ಶಾಸಕ ಅಜಯ್ ಸಿಂಗ್ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರಿಂದಲೇ ಜೆಡಿಎಸ್ ನಾಯಕರು ಯಾರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ ಎಂದು ಅವರು ಸರ್ಕಾರದೊಳಗಿನ ಅಸಮಾಧಾನವನ್ನು ಬಹಿರಂಗಗೊಳಿಸಿದ್ದಾರೆ.
ಅಜಯ್ ಸಿಂಗ್ ಪದಗ್ರಹಣ ಕಾರ್ಯಕ್ರಮಕ್ಕೆ ತಮಗೆ ಆಹ್ವಾನವೂ ಬಂದಿತ್ತು. ತಾವು ಕಾರ್ಯಕ್ರಮಕ್ಕೆ ಹೋಗಬೇಕು ಎಂದುಕೊಂಡಿದ್ದೆವು. ಆದರೆ, ಸಿದ್ದರಾಮಯ್ಯ ಅವರನ್ನು ಕೂಡಿಸಿಕೊಂಡು ಕಾಂಗ್ರೆಸ್ ಶಾಸಕರು,  ಜೆಡಿಎಸ್ ವಿರುದ್ಧ ಇಲ್ಲಸಲ್ಲದ ಆರೋಪ ಹೊರಿಸಿದರೆ ಬೇಸರ ಆಗುತ್ತದೆ ಎಂಬ ಕಾರಣದಿಂದ ಮನಸ್ಸಿದ್ದರೂ ಕಾರ್ಯಕ್ರಮದಿಂದ ದೂರ ಉಳಿಯಬೇಕಾಯಿತು ಎಂಬ ಸಂಗತಿಯನ್ನು ಹೊರ ಹಾಕಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT