ಎಚ್.ಡಿ ಕುಮಾರಸ್ವಾಮಿ ಮತ್ತು ಸಿ.ಎಸ್ ಪುಟ್ಟರಾಜು 
ರಾಜಕೀಯ

ಪ್ರಬುದ್ಧ ಆಡಳಿತದಲ್ಲಿ ಸಿಎಂ ಕುಮಾರಸ್ವಾಮಿ ಪಿಎಚ್‌ಡಿ: ಕಾಂಗ್ರೆಸ್ ಗೆ ಸಿ.ಎಸ್ ಪುಟ್ಟರಾಜು ಟಾಂಗ್

ಸಮ್ಮಿಶ್ರ ಸರ್ಕಾರ ಹಾಗೂ ಪ್ರಬುದ್ಧ ಆಡಳಿತ ನಡೆಸುವುದರಲ್ಲಿ ಮುಖ್ಯಮಂತ್ರಿ ಎಚ್‌. ಡಿ ಕುಮಾರಸ್ವಾಮಿ ಪಿಎಚ್ ಡಿ ಪಡೆದಿದ್ದಾರೆ ಎಂದು ಸಚಿವ ಸಿಎಸ್‌ ಪುಟ್ಟರಾಜು ..

ಬೆಂಗಳೂರು: ಸಮ್ಮಿಶ್ರ ಸರ್ಕಾರ ಹಾಗೂ ಪ್ರಬುದ್ಧ ಆಡಳಿತ ನಡೆಸುವುದರಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪಿಎಚ್ ಡಿ ಪಡೆದಿದ್ದಾರೆ ಎಂದು ಸಚಿವ ಸಿಎಸ್‌ ಪುಟ್ಟರಾಜು ತಿರುಗೇಟು ನೀಡಿದ್ದಾರೆ.  
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಮುಖ್ಯಮಂತ್ರಿ ಕುಮಾರ ಸ್ವಾಮಿಗೆ ಮೆಚ್ಯುರಿಟಿ ಇಲ್ಲ ಎಂದು ಹೇಳಿಕೆ ನೀಡಿರುವ ಮಾಜಿ ಸಚಿವ ಬಸವರಾಜ ರಾಯ ರೆಡ್ಡಿ ವಿರುದ್ಧ ಹರಿ ಹಾಯ್ದಿದ್ದಾರೆ. ರಾಯರೆಡ್ಡಿ ಮೊದಲು ತಮ್ಮ ಮೂಲ ಯಾವುದು ಎಂಬುದನ್ನು ಅರಿತು ಮಾತನಾಡಲಿ ಎಂದು ಕಿಡಿ ಕಾರಿದ್ದಾರೆ.
ದೆಹಲಿಯ ವಿಶೇಷ ಪ್ರತಿನಿಧಿಯಾಗಿ ಶಾಸಕ ಅಜಯ್ ಸಿಂಗ್ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರಿಂದಲೇ ಜೆಡಿಎಸ್ ನಾಯಕರು ಯಾರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ ಎಂದು ಅವರು ಸರ್ಕಾರದೊಳಗಿನ ಅಸಮಾಧಾನವನ್ನು ಬಹಿರಂಗಗೊಳಿಸಿದ್ದಾರೆ.
ಅಜಯ್ ಸಿಂಗ್ ಪದಗ್ರಹಣ ಕಾರ್ಯಕ್ರಮಕ್ಕೆ ತಮಗೆ ಆಹ್ವಾನವೂ ಬಂದಿತ್ತು. ತಾವು ಕಾರ್ಯಕ್ರಮಕ್ಕೆ ಹೋಗಬೇಕು ಎಂದುಕೊಂಡಿದ್ದೆವು. ಆದರೆ, ಸಿದ್ದರಾಮಯ್ಯ ಅವರನ್ನು ಕೂಡಿಸಿಕೊಂಡು ಕಾಂಗ್ರೆಸ್ ಶಾಸಕರು,  ಜೆಡಿಎಸ್ ವಿರುದ್ಧ ಇಲ್ಲಸಲ್ಲದ ಆರೋಪ ಹೊರಿಸಿದರೆ ಬೇಸರ ಆಗುತ್ತದೆ ಎಂಬ ಕಾರಣದಿಂದ ಮನಸ್ಸಿದ್ದರೂ ಕಾರ್ಯಕ್ರಮದಿಂದ ದೂರ ಉಳಿಯಬೇಕಾಯಿತು ಎಂಬ ಸಂಗತಿಯನ್ನು ಹೊರ ಹಾಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT