ಮಾಜಿ ಸಿಎಂ ಸಿದ್ದರಾಮಯ್ಯ 
ರಾಜಕೀಯ

ನಿಮ್ಮ ಶಾಸಕರ ರಾಜೀನಾಮೆ ನಿಮ್ಮ ನಾಯಕತ್ವಕ್ಕೆ ಕೊಟ್ಟ ಏಟು: ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು

ಕಾಂಗ್ರೆಸ್ ನ ಇಬ್ಬರು ಶಾಸಕರ ರಾಜೀನಾಮೆ ನಾಟಕ ಬಿಜೆಪಿ ನಾಯಕರು ಹೆಣೆದಿರುವ ಕುತಂತ್ರ...

ಬೆಂಗಳೂರು: ಕಾಂಗ್ರೆಸ್ ನ ಇಬ್ಬರು ಶಾಸಕರ ರಾಜೀನಾಮೆ ನಾಟಕ ಬಿಜೆಪಿ ನಾಯಕರು ಹೆಣೆದಿರುವ ಕುತಂತ್ರ. ರಾಜ್ಯದ ಜನತೆ ತೀರ್ಪು ನೀಡದಿರುವಾಗ ಹತಾಶೆಯಿಂದ ಹಿಂಬಾಗಿಲಿನಿಂದ ಸರ್ಕಾರ ರಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.
ನಿಮಗೆ 78 ಸೀಟು ಇರುವಾಗ ವಿಧಾನಸಭೆಯಲ್ಲಿ ಕೂರಲು ಈ ರಾಜ್ಯದ ಜನತೆ ತೀರ್ಪು ನೀಡಿದ್ದಾರೆ ಎಂದು ನೀವು ಹೇಳುತ್ತಿರುವುದೇ? ಕಳೆದ ಒಂದು-ಒಂದೂವರೆ ವರ್ಷದಿಂದ ನಡೆಯುತ್ತಿರುವ ರಾಜಕೀಯ ವಿದ್ಯಾಮಾನಗಳನ್ನು ಈ ರಾಜ್ಯದ ಜನತೆ ಸೂಕ್ಷ್ಮವಾಗಿ ನೋಡುತ್ತಿದ್ದಾರೆ.
ಅಧಿಕಾರ ಪಡೆಯುವ ಲಾಲಸೆಯಿಂದ ತಮ್ಮ ಆತ್ಮ ಗೌರವವನ್ನು ಬಿಟ್ಟು ಜೆಡಿಎಸ್ ಮುಂದೆ ಶರಣಾಗಿ ಕೈಮುಗಿದು ನಿಂತು ಹಿಂಬಾಗಿಲಿನಿಂದ ಹೋಗಿ ರಾಹುಲ್ ಗಾಂಧಿಯವರು ಅಧಿಕಾರ ಹೇಗೆ ಗಿಟ್ಟಿಸಿಕೊಂಡರು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ನಿಮ್ಮ ಶಾಸಕರ ರಾಜೀನಾಮೆ ನಿಮ್ಮ ನಾಯಕತ್ವದ ಮೇಲೆ ಕೊಟ್ಟ ಏಟು ಎಂದು ಬಿಜೆಪಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT