ದಡ್ಡಲ್ ಬಸವನಗೌಡ ಮತ್ತು ಪ್ರತಾಪ್ ಗೌಡ ಪಾಟೀಲ್ 
ರಾಜಕೀಯ

ರಾಯಚೂರು ಶಾಸಕರ ಮೇಲೆ ಕಣ್ಣಿಟ್ಟ ಬಿಜೆಪಿ, ಮತ್ತಿಬ್ಬರು ಶಾಸಕರ ರಾಜೀನಾಮೆ?

ಸಮ್ಮಿಶ್ರ ಸರ್ಕಾರದ ಇಬ್ಬರು ಶಾಸಕರು ರಾಜೀನಾಮೆ ಸಲ್ಲಿಸಿದ ಬಳಿಕವೂ ಸಹ ವಿರೋಧ ಪಕ್ಷ ಬಿಜೆಪಿಯೊಡನೆ ಸಂಪರ್ಕದಲ್ಲಿರುವ ಕಾಂಗ್ರೆಸ್ ಶಾಅಸಕರ ಒಂದು ಗುಂಪು ಇನ್ನೂ ಕಾದು ನೋಡುವ ಯೋಜನೆಯನ್ನೇ ಮುಂದುವರಿಸಿದೆ

ರಾಯಚೂರು: ಸಮ್ಮಿಶ್ರ ಸರ್ಕಾರದ ಇಬ್ಬರು ಶಾಸಕರು ರಾಜೀನಾಮೆ ಸಲ್ಲಿಸಿದ ಬಳಿಕವೂ ಸಹ ವಿರೋಧ ಪಕ್ಷ ಬಿಜೆಪಿಯೊಡನೆ ಸಂಪರ್ಕದಲ್ಲಿರುವ ಕಾಂಗ್ರೆಸ್ ಶಾಅಸಕರ ಒಂದು ಗುಂಪು ಇನ್ನೂ ಕಾದು ನೋಡುವ ಯೋಜನೆಯನ್ನೇ ಮುಂದುವರಿಸಿದೆ.ಬಿಜೆಪಿಯ ಮೂಲಗಳ ಪ್ರಕಾರ, ರಾಯಚೂರು ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರು ಈಗ ಪಕ್ಷ ತೊರೆದು ಬಿಜೆಪಿ ಸೇರುವ ಇರಾದೆಯಲ್ಲಿದ್ದಾರೆ.ಇಬ್ಬರು ಶಾಸಕರು ಪ್ರಸ್ತುತ ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ, ಆದಾಗ್ಯೂ, ಅವರು ತಮ್ಮ ನಿರ್ಧಾರವನ್ನು ಜಾರಿಗೆ ತರಲು ಕೆಲವು ಷರತ್ತನ್ನು ಹೊಂದಿದ್ದಾರೆ.
ರಾಯಚೂರು ಗ್ರಾಮೀಣ ಕಾಂಗ್ರೆಸ್ ಶಾಸಕ ದಡ್ಡಲ್ ಬಸವನಗೌಡ ಸಮ್ಮಿಶ್ರ ಸರ್ಕಾರದಲ್ಲಿ ರಾಜೀನಾಮೆ ಸಲ್ಲಿಸುತ್ತಿರುವ 14 ನೇ ವ್ಯಕ್ತಿ ತಾವೆಂದು ಹೇಳುತ್ತಿದ್ದಾರೆ.ಇದರರ್ಥ ಕಾಂಗ್ರೆಸ್-ಜೆಡಿಎಸ್ ನಿಂದ 13 ಶಾಸಕರು ನಿರ್ಗಮಿಸಿದರೆ ಮಾತ್ರ ತಾವು ರಾಜೀನಾಮೆ ಸಲ್ಲಿಸುತ್ತೇವೆ ಎಂದಾಗಿದೆ."ಯಾವುದೇ ಫಲವಿಲ್ಲದೆ ರಾಜೀನಾಮೆ ಸಲ್ಲಿಸಲಾರೆ" ಎಂದು ಅವರು ಬಿಜೆಪಿ ನಾಯಕರಿಗೆ ಕಳಿಸಿದ ಸಂದೇಶದಲ್ಲಿ ತಿಳಿಸಿದ್ದಾರೆ.13 ಶಾಸಕರು ರಾಜೀನಾಮೆ ನೀಡಿದರೆ ನಾವು ಸಹ ರಾಜೀನಾಮೆ ಸಲ್ಲಿಸಲಿದ್ದು ತಾವು 14ನೇಯವರಾಗಿ ರಾಜೀನಾಮೆ ಸಲ್ಲಿಕೆ ಮಾಡುತ್ತೇನೆಂದು ಹೇಳಿದ್ದಾರೆ ಎಂದು ಮೂಲಗಳು ಹೇಳಿದೆ.
ಮಸ್ಕಿಯ ಪ್ರತಾಪ್ ಗೌಡ ಪಾಟೀಲ್ ಕೂಡ ಕೆಲವು ಷರತ್ತುಗಳಿಗೆ ಒಪ್ಪಿದರೆ ರಾಜೀನಾಮೆ ನೀಡಿ ಬಿಜೆಪಿ ಸೇರುವುದಾಗಿ ಹೇಳಿದ್ದಾರೆ.ಮೂಲದ ಪ್ರಕಾರ, ಬಿಜೆಪಿ ಸಂಖ್ಯಾಬಲ ಒಂದು ಹಂತಕ್ಕೆ ಬಂದರೆ ಮಾತ್ರ  ಪ್ರತಾಪ್ ರಾಜೀನಾಮೆ ನೀಡುತ್ತಾರೆ,  ಆಗ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಏರಬಹುದು. ಆದರೆ  ದಡ್ಡಲ್ ಮತ್ತು ಪ್ರತಾಪ್ ಇಬ್ಬರೂ ಈ ಬೆಳವಣಿಗೆಯನ್ನು ನಿರಾಕರಿಸಿದ್ದು . "ನಾನು ಮೊದಲ ಬಾರಿಗೆ ಚುನಾವಣೆಯಲ್ಲಿ ಗೆದ್ದಿದ್ದೇನೆ ಮತ್ತು ನಾನು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠನಾಗಿರುತ್ತೇನೆ". ಈ ಸುದ್ದಿ ಕೇವಲ ವದಂತಿ"  ದಡ್ಡಲ್ ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?