ಸಾಂದರ್ಭಿಕ ಚಿತ್ರ 
ರಾಜಕೀಯ

ಸಿಕ್ಕ ಅಧಿಕಾರವನ್ನು ನಿಭಾಯಿಸಲಾಗದೆ ಹೆಚ್. ವಿಶ್ವನಾಥ್ ಪಲಾಯನ: ಹಳ್ಳಿ ಹಕ್ಕಿಗೆ ಮತ್ತೆ ಗುಮ್ಮಿದ ಟಗರು

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್ ಕೆ ಕುಮಾರಸ್ವಾಮಿ ನೇಮಕವಾದ ಬೆನ್ನಲ್ಲೇ, ಒಂದು ಕಾಲದಲ್ಲಿ ಆಪ್ತರಾಗಿ ಕಾಲ ಕ್ರಮೇಣ ದೂರವಾಗಿದ್ದ ಹೆಚ್ . ವಿಶ್ವನಾಥ್ ವಿರುದ್ಧ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಟ್ವಿಟರ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು:  ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್ ಕೆ ಕುಮಾರಸ್ವಾಮಿ ನೇಮಕವಾದ ಬೆನ್ನಲ್ಲೇ, ಒಂದು ಕಾಲದಲ್ಲಿ ಆಪ್ತರಾಗಿ ಕಾಲ ಕ್ರಮೇಣ ದೂರವಾಗಿದ್ದ ಹೆಚ್ . ವಿಶ್ವನಾಥ್ ವಿರುದ್ಧ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಟ್ವಿಟರ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ,ತಮಗೆ ಸಿಕ್ಕ ಅಧ್ಯಕ್ಷ ಹುದ್ದೆಯನ್ನು ಸರಿಯಾಗಿ 6 ತಿಂಗಳು ಕೂಡಾ ನಿಭಾಯಿಸಲಾಗದೆ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಪಲಾಯನ ಮಾಡಿರುವ ಹೆಚ್ . ವಿಶ್ವನಾಥ್ ಸದಾ ಇತರರ ಸಾಮರ್ಥ್ಯವನ್ನು ಪ್ರಶ್ನಿಸುತ್ತಾ ತಮ್ಮ ದೌರ್ಬಲ್ಯವನ್ನು ಮರೆ ಮಾಚಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಅಲ್ಲದೇ, ವಿಶ್ವನಾಥ್ ಬಗ್ಗೆ ತಮ್ಮಗೆ ಅನುಕಂಪವಿದೆ ಎಂದು ಹೇಳುವ ಮೂಲಕ ವಿಶ್ವನಾಥ್ ಅವರ ಕಾಲೆಳೆದಿದ್ದಾರೆ.
ನವದೆಹಲಿಯಲ್ಲಿ ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡಿದ್ದ ವಿಶ್ವನಾಥ್, ಸಮ್ಮಿಶ್ರ ಸರ್ಕಾರ ಮುಂದುವರೆಸುವ ಆಸಕ್ತಿ ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದೆನಿಸುತ್ತಿದೆ. ರಾಜ್ಯದ ಜನರೂ ಕೂಡಾ ಇದೇ ಅಭಿಪ್ರಾಯ ಹೊಂದಿದ್ದಾರೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಹೊಂದಾಣಿಕೆ ಕೊರತೆ ಇದೆ. ರಾಜ್ಯ ರಾಜಕಾರಣ ಅಧೋಗತಿಗೆ ಸಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT