ರಾಜಕೀಯ

ರೈಲ್ವೆ, ನೀರಾವರಿ ಯೋಜನೆ ಅನುಷ್ಠಾನಕ್ಕೆ ತರುವುದು ಸಂಗಣ್ಣ ಕರಡಿ ಗುರಿ!

ಕೊಪ್ಪಳ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಎರಡನೇ ಬಾರಿ ಜಯಗಳಿಸಿದ್ದಾರೆ. ಕ್ಷೇತ್ರದ ಜನರ ನಾಡಿಮಿಡಿತವನ್ನು ಸಂಗಣ್ಣ ಬಹಳ ..

ಕೊಪ್ಪಳ: ಕೊಪ್ಪಳ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಎರಡನೇ ಬಾರಿ ಜಯಗಳಿಸಿದ್ದಾರೆ. ಕ್ಷೇತ್ರದ ಜನರ ನಾಡಿಮಿಡಿತವನ್ನು ಸಂಗಣ್ಣ ಬಹಳ ಚೆನ್ನಾಗಿ ಅರ್ಥೈಸಿಕೊಂಡಿದ್ದಾರೆ.
ರೈಲ್ವೆ ಮತ್ತು ನೀರಾವರಿ ಯೋಜನೆಗಳನ್ನು ಜಾರಿಗೆ ಅನುಷ್ಠಾನಗೊಳಿಸುವ ಗುರಿ ಹೊಂದಿದ್ದಾರೆ. ಕೇಂದ್ರ ಸಚಿವರುಗಳಾದ ಪ್ರಹ್ಲಾದ್ ಜೋಶಿ ಮತ್ತು ಸುರೇಶ್ ಅಂಗಡಿ ತಮ್ಮ ಉದ್ದೇಶಿತ ಯೋಜನೆಗಳನ್ನು ಸಾಕಾರಗೊಳಿಸಲು ಎಲ್ಲಾ ರೀತಿಯ ಬೆಂಬಲ ನೀಡುತ್ತಿದ್ದಾರೆ.
ಹಿಂದಿನ ಅವಧಿಯಲ್ಲಿ ಮುನಿರಾಬಾದ್- ಮೆಹಬೂಬ್ ನಗರ ರೈಲ್ವೆ ಪ್ರಾಜೆಕ್ಟ್ ಅಡಿಯಲ್ಲಿ ಹುಬ್ಬಳ್ಳಿ ಮತ್ತು ಗಂಗಾವತಿ ರೈಲು ಸೇವೆ ಆರಂಭಿಸುವುದಾಗಿ ಭರವಸೆ ನೀಡಿದ್ದರು, ಅದು ಆರಂಭವಾಗಿದೆ, ಹೀಗಾಗಿ ಈ ವೇಳೆರಾಯಚೂರು ಜಿಲ್ಲೆಯ ಗಂಗಾವತಿ ಮತ್ತಪ ಸಿಂಧೂರು ನಡುವೆ ರೈಲು ಸೇವೆ ವಿಸ್ತರಿಸುವುದಾಗಿ ತಿಳಿಸಿದ್ದಾರೆ. ಇತ್ತೀಚೆಗೆ ಗಂಗಾವತಿ ಮತ್ತು ಹುಬ್ಬಳ್ಳಿ ನಡುವೆ ಪ್ಯಾಸೆಂಜರ್ ರೈಲು ಸಂಚರಿಸುತ್ತಿದೆ.
ಯುಕೆಪಿ 3ನೇ ಹಂತದ ನೀರಾವರಿ ಯೋಜನೆ ಅಡಿಯಲ್ಲಿ ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಿದರೇ ಸಾವಿರಾರು ಎಕರೆ ಭೂಮಿಗೆ ನೀರಾವರಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬಹುದಾಗಿದೆ ಎಂದು ಕರಡಿ ಸಂಗಣ್ಣ ಹೇಳಿದ್ದಾರೆ.
ಜೊತೆಗೆ ಈ ಯೋಜನೆ ಜಾರಿಗೆ ತರಬೇಕು ಬದ್ಧವಾಗಿರುವುದಾಗಿ ತಿಳಿಸಿದ್ದಾರೆ, ನವಲಿ ಗ್ರಾಮದಲ್ಲಿರುವ ಜಲಾಶಯವನ್ನು ಸಮತೋಲನಗೊಳಿಸುವ ಪ್ರಸ್ತಾವನೆ ಕೂಡ ಸಂಗಣ್ಣ ಆವರ ಮುಂದಿದೆ,  ತುಂಗಭದ್ರಾ ಜಲಾಶಯದ ಹೂಳೆತ್ತು ಕಾರ್ಯ ಹಾಗೂ ರಾಯಚೂರು ಜಿಲ್ಲೆಯ ಮಾನ್ವಿ ಮತ್ತು ಸಿಂಧನೂರು ತಾಲೂಕುಗಳ ರೈತರ ಬೆಳೆಗಳಿಗೆ ನೀರು ಪೂರೈಸುವ ಉದ್ದೇಶವನ್ನು ಹೊಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT