ರಾಜಕೀಯ

ವಿಶ್ವನಾಥ್ ಸೇರಿ ಇಂದು 8 ಶಾಸಕರ ರಾಜಿನಾಮೆ? ಪತನವಾಗುತ್ತಾ ಸಮ್ಮಿಶ್ರ ಸರ್ಕಾರ?

Shilpa D
ಬೆಂಗಳೂರು:  ರಾಜ್ಯ ರಾಜಕಾರಣದಲ್ಲಿ ಬಹು ದೊಡ್ಡ ಆಪರೇಷನ್ ಕಮಲ ನಡೆಯುತ್ತಿದ್ದು, ಬರೋಬ್ಬರಿ 8 ಶಾಸಕರು ರಾಜೀನಾಮೆ ಕೊಡುವ ಸಾಧ್ಯತೆ ಇದೆ. 
ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿದಂತೆ 8 ಹೆಚ್ಚು ಅತೃಪ್ತ ಶಾಸಕರು ಇಂದು ರಾಜೀನಾಮೆ ಕೊಡುವ ಸಾಧ್ಯತೆ ಇದೆ. ಅದರಲ್ಲೂ ಬಂಡಾಯಗಾರರ ಪಟ್ಟಿಯಲ್ಲಿ ಬೆಂಗಳೂರಿನ ಐವರು ಶಾಸಕರ ಹೆಸರೂ ಇದೆ ಎಂಬುದಾಗಿ ತಿಳಿದುಬಂದಿದೆ. ಹೀಗಾಗಿ ಶಾಸಕರು ಸ್ಪೀಕರ್ ಕಚೇರಿಗೆ ಆಗಮಿಸಿದ್ದಾರೆ. 
ರಮೇಶ್ ಜಾರಕಿಹೊಳಿ, ಬಿಸಿ ಪಾಟೀಲ್, ಜೆಡಿಎಸ್ ನ ಎಚ್.ವಿಶ್ವನಾಥ್ ಹಾಗೂ ಗೋಪಾಲಯ್ಯ ಹಾಗೂ ಶಿವರಾಮ್ ಹೆಬ್ಬಾರ್, ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ರಾಜೀನಾಮೆ, ಮಹೇಶ್ ಕುಮಟಳ್ಳಿ ವಿಧಾನಸೌಧದಲ್ಲಿ ಸ್ಪೀಕರ್ ಕಚೇರಿಗೆ ಆಗಮಿಸಿದ್ದಾರೆ. ಇವರೆಲ್ಲರೂ  ಇಂದು ರಾಜಿನಾಮೆ ನೀಡುತ್ತಾರೆ ಎಂದು ಹೇಳಲಾಗುತ್ತಿದೆ. 
SCROLL FOR NEXT