ರಾಜಭವನದ ಬಳಿ ಕಾಂಗ್ರೆಸ್-ಜೆಡಿಎಸ್ ಶಾಸಕರು 
ರಾಜಕೀಯ

13 ಶಾಸಕರ ರಾಜೀನಾಮೆ, ಆಪರೇಷನ್ ರೆಸಾರ್ಟ್ ರಾಜಕೀಯ ಮುಂಬೈಗೆ ಶಿಫ್ಟ್

ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ 13 ಶಾಸಕರು ಶನಿವಾರ ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು,....

ಬೆಂಗಳೂರು: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ 13 ಶಾಸಕರು ಶನಿವಾರ ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ 13 ತಿಂಗಳ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಗಂಡಾಂತರ ಎದುರಾಗಿದೆ.
ಕಳೆದ ವಾರ ವಿಜಯನಗರ ನಗರದ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡುವ ಮೂಲಕ ಆರಂಭವಾಗಿದ್ದ ಆಪರೇಷನ್ ಕಮಲ ಇಂದು ನಿರ್ಣಾಯಕ ಘಟ್ಟ ತಲುಪಿದ್ದು, ಈ ಬೆಳವಣಿಗೆ ಮೈತ್ರಿ ಸರ್ಕಾರದ ಪತನಕ್ಕೆ ನಾಂದಿ ಹಾಡುವ ಸಾಧ್ಯತೆಗಳು ಹೆಚ್ಚಾಗಿವೆ.
ಎರಡೂ ಪಕ್ಷಗಳ ಅತೃಪ್ತ ಶಾಸಕರ ಗುಂಪು ಏಕಾಏಕಿ ಆರಂಭಿಸಿದ ರಾಜಕೀಯ ಕಾರ್ಯಾಚರಣೆಯಿಂದ ಮೈತ್ರಿ ಕೂಟದ ನಾಯಕರು ಥರಗುಟ್ಟುವಂತಾಗಿದ್ದು, ಸರ್ಕಾರ ಉಳಿಸಿಕೊಳ್ಳಲು ದೋಸ್ತಿ ನಾಯಕರು ಕಸರತ್ತು ನಡೆಸುತ್ತಿದ್ದಾರೆ.
ಇಂದು ಒಟ್ಟು 13 ಶಾಸಕರು ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆ ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದರು. ಬಳಿಕ 10 ಅತೃಪ್ತ ಶಾಸಕರು ರಾಜಭವನದಿಂದ ಎಚ್‌ಎಎಲ್‌ ಏರ್‌ಪೋರ್ಟ್‌ಗೆ ತೆರಳಿ, ಅಲ್ಲಿಂದ ಮುಂಬೈ ತಲುಪಿದ್ದಾರೆ. 
ಮುಂಬೈನ ಖಾಸಗಿ ಹೋಟೆಲ್‌ನಲ್ಲಿ ಅತೃಪ್ತ ಶಾಸಕರು ತಂಗಿದ್ದಾರೆ. ಅಲ್ಲದೆ, ಬಿಜೆಪಿ ಶಾಸಕ ಡಾ. ಅಶ್ವತ್ಥ್‌ ನಾರಾಯಣ ಅವರು ಅತೃಪ್ತ ಶಾಸಕರ ನೇತೃತ್ವ ವಹಿಸಿದ್ದಾರೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ