ರಾಜಭವನದ ಬಳಿ ಕಾಂಗ್ರೆಸ್-ಜೆಡಿಎಸ್ ಶಾಸಕರು 
ರಾಜಕೀಯ

13 ಶಾಸಕರ ರಾಜೀನಾಮೆ, ಆಪರೇಷನ್ ರೆಸಾರ್ಟ್ ರಾಜಕೀಯ ಮುಂಬೈಗೆ ಶಿಫ್ಟ್

ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ 13 ಶಾಸಕರು ಶನಿವಾರ ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು,....

ಬೆಂಗಳೂರು: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ 13 ಶಾಸಕರು ಶನಿವಾರ ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ 13 ತಿಂಗಳ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಗಂಡಾಂತರ ಎದುರಾಗಿದೆ.
ಕಳೆದ ವಾರ ವಿಜಯನಗರ ನಗರದ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡುವ ಮೂಲಕ ಆರಂಭವಾಗಿದ್ದ ಆಪರೇಷನ್ ಕಮಲ ಇಂದು ನಿರ್ಣಾಯಕ ಘಟ್ಟ ತಲುಪಿದ್ದು, ಈ ಬೆಳವಣಿಗೆ ಮೈತ್ರಿ ಸರ್ಕಾರದ ಪತನಕ್ಕೆ ನಾಂದಿ ಹಾಡುವ ಸಾಧ್ಯತೆಗಳು ಹೆಚ್ಚಾಗಿವೆ.
ಎರಡೂ ಪಕ್ಷಗಳ ಅತೃಪ್ತ ಶಾಸಕರ ಗುಂಪು ಏಕಾಏಕಿ ಆರಂಭಿಸಿದ ರಾಜಕೀಯ ಕಾರ್ಯಾಚರಣೆಯಿಂದ ಮೈತ್ರಿ ಕೂಟದ ನಾಯಕರು ಥರಗುಟ್ಟುವಂತಾಗಿದ್ದು, ಸರ್ಕಾರ ಉಳಿಸಿಕೊಳ್ಳಲು ದೋಸ್ತಿ ನಾಯಕರು ಕಸರತ್ತು ನಡೆಸುತ್ತಿದ್ದಾರೆ.
ಇಂದು ಒಟ್ಟು 13 ಶಾಸಕರು ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆ ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದರು. ಬಳಿಕ 10 ಅತೃಪ್ತ ಶಾಸಕರು ರಾಜಭವನದಿಂದ ಎಚ್‌ಎಎಲ್‌ ಏರ್‌ಪೋರ್ಟ್‌ಗೆ ತೆರಳಿ, ಅಲ್ಲಿಂದ ಮುಂಬೈ ತಲುಪಿದ್ದಾರೆ. 
ಮುಂಬೈನ ಖಾಸಗಿ ಹೋಟೆಲ್‌ನಲ್ಲಿ ಅತೃಪ್ತ ಶಾಸಕರು ತಂಗಿದ್ದಾರೆ. ಅಲ್ಲದೆ, ಬಿಜೆಪಿ ಶಾಸಕ ಡಾ. ಅಶ್ವತ್ಥ್‌ ನಾರಾಯಣ ಅವರು ಅತೃಪ್ತ ಶಾಸಕರ ನೇತೃತ್ವ ವಹಿಸಿದ್ದಾರೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT