ರಾಜಕೀಯ

ಅಲ್ಪ ಮತಕ್ಕೆ ಕುಸಿದ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ

Nagaraja AB
ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ 14 ಶಾಸಕರ ರಾಜೀನಾಮೆಯಿಂದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ.
ಸದ್ಯ ವಿಧಾನಸಭೆಯಲ್ಲಿರುವ ಶಾಸಕರ ಸಂಖ್ಯಾಬಲ 210 ಆಗಿದ್ದು, ಉಭಯ ಪಕ್ಷಗಳ  14 ಶಾಸಕರ ರಾಜೀನಾಮೆಯಿಂದಾಗಿ ಸಮ್ಮಿಶ್ರ ಸರ್ಕಾರ ಇದೀಗ 105ಕ್ಕೆ ಕುಸಿದಿದೆ. ಪ್ರತಿಪಕ್ಷ ಬಿಜೆಪಿಯ ಸಂಖ್ಯಾ ಬಲ 105 ಆಗಿದೆ.ಬಹುಮತಕ್ಕೆ 106 ಶಾಸಕರ ಬೆಂಬಲ ಅಗತ್ಯವಿದೆ. ಒಂದು ವೇಳೆ ಪಕ್ಷೇತರ ಶಾಸಕರು ಬಿಜೆಪಿ ಕಡೆ ವಾಲಿದರೆ 107 ಆಗಲಿದೆ. ಅಂತಹ ಸಂದರ್ಭದಲ್ಲಿ ಬಿಜೆಪಿ ಸುಲಭವಾಗಿ ಸರ್ಕಾರ ರಚಿಸಬಹುದಾಗಿದೆ.
ಮುಂದಿನ ಸರದಿಯಲ್ಲಿ ನಾಗೇಂದ್ರ, ರೋಶನ್ ಬೇಗ್, ಸೌಮ್ಯ ರೆಡ್ಡಿ, ಅಂಜಲಿ ನಿಂಬಳ್ಕರ್, ಲಿಂಗೇಶ್, ಕೆ. ಸುಧಾಕರ್, ಸುಬ್ಬಾರೆಡ್ಡಿ, ಶ್ರೀನಿವಾಸ ಗೌಡ, ವಿ. ಮುನಿಯಪ್ಪ ಕೂಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಮತ್ತೊಂದೆಡೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಅವರಿಂದ ಮನವೊಲಿಕೆಯ ಯತ್ನಗಳು ನಡೆಯುತ್ತಿವೆ.
ಶಾಸಕರ ರಾಜೀನಾಮೆಯಿಂದಾಗಿ ರಾಜ್ಯ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಮುಂದಿನ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿದೆ. 
SCROLL FOR NEXT