ರಾಜೀನಾಮೆ ಸಲ್ಲಿಸಿದ ಶಾಸಕರು 
ರಾಜಕೀಯ

ಆಪರೇಷನ್ ಕಮಲ 2.0 : ಸಮ್ಮಿಶ್ರ ಸರ್ಕಾರ ಪತನದ ಹಿಂದೆ ಕೇಂದ್ರ ಸಚಿವರ ಕೈವಾಡ- ಮೂಲಗಳು

ರಾಜ್ಯ ಸಮ್ಮಿಶ್ರ ಸರ್ಕಾರದ ಪತನಗೊಳಿಸುವ ಹಿಂದೆ ಕೇಂದ್ರದ ಹಾಲಿ ಸಚಿವರೊಬ್ಬರ ಕೈವಾಡವಿದೆ ಎಂಬಂತಹ ಮಾಹಿತಿ ಬಿಜೆಪಿಯ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಪತನಗೊಳಿಸುವ ಹಿಂದೆ ಕೇಂದ್ರದ ಹಾಲಿ ಸಚಿವರೊಬ್ಬರ ಕೈವಾಡವಿದೆ ಎಂಬಂತಹ ಮಾಹಿತಿ ಬಿಜೆಪಿಯ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಆ ಸಚಿವರು ರಾಜಕೀಯ ಬೆಳವಣಿಗೆಯ ಇಂಚಿಂಚು ಮಾಹಿತಿಯನ್ನು ಪಡೆಯುತ್ತಿದ್ದು, ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂಬುದು ತಿಳಿದುಬಂದಿದೆ.
ವಿಧಾನಸಭೆ ಪ್ರತಿಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಇಬ್ಬರು ನಿಷ್ಠಾವಂತ ಮುಖಂಡರು ಯುಬಿ ಸಿಟಿ ಹೋಟೆಲ್ ನಲ್ಲಿ ಅತೃಪ್ತ ಶಾಸಕರೊಂದಿಗೆ ಸಭೆಯನ್ನು ಆಯೋಜಿಸಿದ್ದಾರೆ. ನಂತರ ಪ್ರತ್ಯೇಕವಾಗಿ ಉಭಯ ಪಕ್ಷಗಳ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನು ಮುಂಚಿತವಾಗಿಯೇ ಯೋಚಿಸಲಾಗಿದ್ದು, ಸಮಯವನ್ನು ಕೂಡಾ ಮುಂಚಿತವಾಗಿಯೇ ನಿಗದಿಪಡಿಸಲಾಗಿದೆ ಎಂದು ಮತ್ತೊಂದು ಮೂಲದಿಂದ ತಿಳಿದುಬಂದಿದೆ.
ಪೋನ್ ಕದ್ದಾಲಿಕೆಯ ಭೀತಿ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಡಮ್ಮಿ ನಂಬರ್ ಗಳನ್ನು ಬಳಸಿಕೊಳ್ಳಲಾಗಿದ್ದು, ಕೋಡ್ ವರ್ಲ್ಡ್ಸ್ ಮೂಲಕ ಸಂಭಾಷಣೆ ನಡೆಸಲಾಗಿದೆ ಎನ್ನಲಾಗಿದೆ. 
 ರಾಜೀನಾಮೆ ನೀಡಿದ ಶಾಸಕರು ವಿಮಾನ ನಿಲ್ದಾಣದವರೆಗೂ ಬಸ್ ನಲ್ಲಿ ತೆರಳಿದ್ದು, ಮುಂಬೈಗೆ ಪ್ರಯಾಣಿಸಿದ್ದಾರೆ. ಮುಂಗಾರು ಅಧಿವೇಶನಕ್ಕೆ ಕೆಲ ದಿನಗಳು ಬಾಕಿ ಇರುವಂತೆಯೇ ನಡೆದಿರುವ ಈ ಆಪರೇಷನ್ ಕಮಲದಿಂದಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್  ಸಮ್ಮಿಶ್ರ ಸರ್ಕಾರ ಪತನಕ್ಕೆ ಕೌಂಟ್ ಡೌನ್ ಶುರುವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT