ಆರ್. ಅಶೋಕ್ 
ರಾಜಕೀಯ

ಮೈತ್ರಿ ಸರ್ಕಾರದ ಪಾಪದ ಕೊಡ ತುಂಬಿದೆ- ಆರ್ .ಅಶೋಕ್

ಮೈತ್ರಿ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿಯ ಪಾತ್ರವಿಲ್ಲ, ನಾವು ಸೂತ್ರದಾರರು ಅಲ್ಲ, ಪಾತ್ರದಾರರೂ ಅಲ್ಲ, ವೀಕ್ಷಕರು ಮಾತ್ರ . ಮೈತ್ರಿ ಸರ್ಕಾರದ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ಹಿರಿಯ ಮುಖಂಡ ಆರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರು: ಮೈತ್ರಿ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿಯ ಪಾತ್ರವಿಲ್ಲ, ನಾವು ಸೂತ್ರದಾರರು ಅಲ್ಲ, ಪಾತ್ರದಾರರೂ ಅಲ್ಲ, ವೀಕ್ಷಕರು ಮಾತ್ರ . ಮೈತ್ರಿ ಸರ್ಕಾರದ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ಹಿರಿಯ ಮುಖಂಡ ಆರ್. ಅಶೋಕ್  ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್- ಜೆಡಿಎಸ್ ಮದುವೆ ಮುರಿದು ಬೀಳುವುದಕ್ಕೆ ನಾವು ಪುರೋಹಿತರಲ್ಲ. ಕಾಂಗ್ರೆಸ್ - ಜೆಡಿಎಸ್ ನೇತೃತ್ವದ ಸರ್ಕಾರ ಒಂದು ವರ್ಷದಿಂದ ರಾಜ್ಯವನ್ನು ಲೂಟಿ ಮಾಡಿದೆ. ಆ ಪಕ್ಷಗಳ ನಡುವಿನ ಗೊಂದಲ, ಅಸಮಾಧಾನಗಳ ಕಾರಣಕ್ಕಾಗಿ ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದರು.
 ಬಿಜೆಪಿಗೂ ಕಾಂಗ್ರೆಸ್ - ಜೆಡಿಎಸ್ ಶಾಸಕರ ರಾಜೀನಾಮೆಗೂ ಯಾವುದೇ ಸಂಬಂಧವಿಲ್ಲ.  ಅವರು ರಾಜೀನಾಮೆ ನೀಡುವಲ್ಲಿ ನಮ್ಮ ಪಾತ್ರ ಏನೂ ಇಲ್ಲ ಎಂದು ಅವರು ಸ್ಪಷ್ಪಪಡಿಸಿದರು.
ಮುಂದಿನ ರಾಜಕೀಯ ನಡೆ ಬಗ್ಗೆ ವರಿಷ್ಠರು ಸಲಹೆ ಸೂಚನೆ ನೀಡಲಿದ್ದಾರೆ. ಅದರನ್ವಯ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ಸಮಾಲೋಚಿಸಿ ಎರಡು ಮೂರು ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT