ಆರ್. ಅಶೋಕ್ 
ರಾಜಕೀಯ

ಮೈತ್ರಿ ಸರ್ಕಾರದ ಪಾಪದ ಕೊಡ ತುಂಬಿದೆ- ಆರ್ .ಅಶೋಕ್

ಮೈತ್ರಿ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿಯ ಪಾತ್ರವಿಲ್ಲ, ನಾವು ಸೂತ್ರದಾರರು ಅಲ್ಲ, ಪಾತ್ರದಾರರೂ ಅಲ್ಲ, ವೀಕ್ಷಕರು ಮಾತ್ರ . ಮೈತ್ರಿ ಸರ್ಕಾರದ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ಹಿರಿಯ ಮುಖಂಡ ಆರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರು: ಮೈತ್ರಿ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿಯ ಪಾತ್ರವಿಲ್ಲ, ನಾವು ಸೂತ್ರದಾರರು ಅಲ್ಲ, ಪಾತ್ರದಾರರೂ ಅಲ್ಲ, ವೀಕ್ಷಕರು ಮಾತ್ರ . ಮೈತ್ರಿ ಸರ್ಕಾರದ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ಹಿರಿಯ ಮುಖಂಡ ಆರ್. ಅಶೋಕ್  ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್- ಜೆಡಿಎಸ್ ಮದುವೆ ಮುರಿದು ಬೀಳುವುದಕ್ಕೆ ನಾವು ಪುರೋಹಿತರಲ್ಲ. ಕಾಂಗ್ರೆಸ್ - ಜೆಡಿಎಸ್ ನೇತೃತ್ವದ ಸರ್ಕಾರ ಒಂದು ವರ್ಷದಿಂದ ರಾಜ್ಯವನ್ನು ಲೂಟಿ ಮಾಡಿದೆ. ಆ ಪಕ್ಷಗಳ ನಡುವಿನ ಗೊಂದಲ, ಅಸಮಾಧಾನಗಳ ಕಾರಣಕ್ಕಾಗಿ ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದರು.
 ಬಿಜೆಪಿಗೂ ಕಾಂಗ್ರೆಸ್ - ಜೆಡಿಎಸ್ ಶಾಸಕರ ರಾಜೀನಾಮೆಗೂ ಯಾವುದೇ ಸಂಬಂಧವಿಲ್ಲ.  ಅವರು ರಾಜೀನಾಮೆ ನೀಡುವಲ್ಲಿ ನಮ್ಮ ಪಾತ್ರ ಏನೂ ಇಲ್ಲ ಎಂದು ಅವರು ಸ್ಪಷ್ಪಪಡಿಸಿದರು.
ಮುಂದಿನ ರಾಜಕೀಯ ನಡೆ ಬಗ್ಗೆ ವರಿಷ್ಠರು ಸಲಹೆ ಸೂಚನೆ ನೀಡಲಿದ್ದಾರೆ. ಅದರನ್ವಯ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ಸಮಾಲೋಚಿಸಿ ಎರಡು ಮೂರು ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT