ಅತೃಪ್ತ ಶಾಸಕರು 
ರಾಜಕೀಯ

ಅತೃಪ್ತ ಶಾಸಕರು ತಂಗಿರುವ ಮುಂಬೈ ಹೋಟೆಲ್ ಮುಂದೆ ಕಾಂಗ್ರೆಸ್ ಪ್ರತಿಭಟನೆ

ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನ ಸೊಫಿಟೆಲ್‌ ಹೊಟೇಲ್‌ನಲ್ಲಿ ತಂಗಿರುವ ಅತೃಪ್ತ ಶಾಸಕರ...

ಮುಂಬೈ: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನ ಸೊಫಿಟೆಲ್‌ ಹೊಟೇಲ್‌ನಲ್ಲಿ ತಂಗಿರುವ ಅತೃಪ್ತ ಶಾಸಕರ ವಿರುದ್ಧ ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರು ಭಾನುವಾರ ಬೃಹತ್‌ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ನಿನ್ನೆ ವಿಧಾನಸಭೆ ಸ್ಪೀಕರ್ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದ ಬಳಿಕ ವಿಶೇಷ ವಿಮಾನದ ಮೂಲಕ ಮುಂಬೈಗೆ ತೆರಳಿದ ಕಾಂಗ್ರೆಸ್ ಮತ್ತು ಜೆಡಿಎಸ್‌ ನ 10 ಶಾಸಕರ ವಿರುದ್ಧ ಹಿರಿಯ ಕಾಂಗ್ರೆಸ್ ನಾಯಕರಾದ ಮೊಹಮ್ಮದ್ ಆರೀಫ್ ನಸೀಮ್ ಖಾನ್, ಏಕನಾತ್ ಗಾಯಕ್ವಾಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ಹೊಟೇಲ್‌ಗೆ ಪೊಲೀಸ್‌ ಬಿಗಿ ಭದ್ರತೆ ಒದಗಿಸಲಾಗಿದೆ. ಹೊಟೇಲ್‌ ಒಳಗೆ ಹೊಟೇಲ್‌ನ ಸಿಬಂದಿ ಭದ್ರತೆ ಕೈಗೊಂಡಿದ್ದು, ಹೊರಗೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಹೊಟೇಲ್‌ಗೆ ಶಾಸಕರ ಆಪ್ತರಾಗಿರುವ ಕೆಲ ಬಿಜೆಪಿ ಮತ್ತು ಕಾಂಗ್ರೆಸ್‌ ಮುಖಂಡರು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ರಾಜೀನಾಮೆ ನೀಡಿರುವ ಕಾಂಗ್ರೆಸ್‌ ಶಾಸಕರಾದ ರಮೇಶ್‌ ಜಾರಕಿಹೊಳಿ, ಬೈರತಿ ಬಸವರಾಜ್‌, ಎಸ್‌.ಟಿ.ಸೋಮ ಶೇಖರ, ಬಿ.ಸಿ.ಪಾಟೀಲ್‌, ಮಹೇಶ್‌ ಕುಮಟಳ್ಳಿ, ಪ್ರತಾಪಗೌಡ ಪಾಟೀಲ್‌, ಶಿವರಾಮ್‌ ಹೆಬ್ಟಾರ್‌ ಅವರು ಹೊಟೇಲ್‌ನಲ್ಲಿದ್ದಾರೆ.
ಇತ್ತ ಬೆಂಗಳೂರಿನ ಕೆಪಿಸಿಸಿ ಕಚೇರಿಯ ಎದುರೂ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರೆಬೆಲ್‌ ಶಾಸಕರು ರಾಜೀನಾಮೆ ವಾಪಾಸ್‌ ಪಡೆಯಲು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel