ಪಿಎಂ ನರೇಂದ್ರ ಮೋದಿ 
ರಾಜಕೀಯ

ತೊಘಲಕ್ ನಂತರ ಭಾರತವನ್ನು ಆಳುತ್ತಿರುವ ಅದೇ ಗುಣಗಳುಳ್ಳ ವ್ಯಕ್ತಿ ನರೇಂದ್ರ ಮೋದಿ: ಕಾಂಗ್ರೆಸ್ ಟೀಕೆ

ತೊಘಲಕ್ ಸಂತತಿಯ ಪ್ರಸಿದ್ಧ ಸುಲ್ತಾನ ಮುಹಮ್ಮದ್ ಬಿನ್ ತುಘಲಕ್. ಆತನು ಒಳ್ಳೆಯ, ಕೆಟ್ಟ, ನೀಚ , ಬುದ್ಧಿವಂತ ...

ಬೆಂಗಳೂರು: ತೊಘಲಕ್ ಸಂತತಿಯ ಪ್ರಸಿದ್ಧ ಸುಲ್ತಾನ ಮುಹಮ್ಮದ್ ಬಿನ್ ತುಘಲಕ್. ಆತನು ಒಳ್ಳೆಯ, ಕೆಟ್ಟ, ನೀಚ , ಬುದ್ಧಿವಂತ ಹಾಗೂ ಹುಚ್ಚು ಗುಣಗಳೆಲ್ಲವನ್ನೂ ಒಳಗೊಂಡ ಪ್ರಸಿದ್ದ ದೆಹಲಿಯ ಸುಲ್ತಾನನಾಗಿದ್ದನು. ಅಂತಹ ರಾಜನಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ರಾಜ್ಯ ಕಾಂಗ್ರೆಸ್ ಹೋಲಿಸಿದೆ.
ಸಾಮಾಜಿಕ ಜಾಲತಾಣ ಟ್ವಿಟ್ಟರ್​ನಲ್ಲಿ ವಾಗ್ದಾಳಿ ನಡೆಸಿರುವ ಕೆಪಿಸಿಸಿ, ನೈತಿಕತೆ, ಮೌಲ್ಯಹೀನ ರಾಜಕಾರಣಿ ಮೋದಿ ಸಂವಿಧಾನ, ಪ್ರಜಾಪ್ರಭುತ್ವಕ್ಕೆ ತಿಲಾಂಜಲಿ ಇಟ್ಟರು. 10 ರಾಜ್ಯಗಳಲ್ಲಿ ಆಪರೇಷನ್ ಕಮಲ ಮಾಡಿದ್ದಾರೆ. ಕರ್ನಾಟಕ ರಾಜ್ಯ ಮೋದಿ ಸಂಚಿಗೆ ಬಲಿಯಾಗಬಾರದು ಎಂದು ಟ್ವೀಟ್ ಮಾಡಿದೆ.
ರಾಜ್ಯದಲ್ಲಿ ನಿನ್ನೆ ಮತ್ತೆ ನಡೆದಿರುವ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ 11 ಶಾಸಕರು ರಾಜೀನಾಮೆ ನೀಡಿದ್ದು ಮೈತ್ರಿ ಸರ್ಕಾರದ ಉಳಿವಿನ ಬಗ್ಗೆ ಆತಂಕ ಶುರುವಾಗಿದೆ. ಶಾಸಕರ ರಾಜೀನಾಮೆ ಹಿಂದೆ ಕೇಂದ್ರದ ಬಿಜೆಪಿ ನಾಯಕರುಗಳಾದ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಕೈವಾಡವಿದೆ ಎಂಬುದು ರಾಜ್ಯ ಕಾಂಗ್ರೆಸ್ ನಾಯಕರ ವಾದವಾಗಿದೆ. 
ಈ ಮಧ್ಯೆ ತಮ್ಮ ರಾಜೀನಾಮೆ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕೆಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಮಧ್ಯಾಹ್ನ 2.30ಕ್ಕೆ ರಾಜೀನಾಮೆ; ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT