ಸಾಂದರ್ಭಿಕ ಚಿತ್ರ 
ರಾಜಕೀಯ

ಐವರು ಬಿಜೆಪಿ ಶಾಸಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದಾರೆ: ಸಚಿವ ತಿಮ್ಮಾಪುರ

ಕಾಂಗ್ರೆಸ್ ಶಾಸಕರ ರಾಜೀನಾಮೆ ಸಮ್ಮಿಶ್ರ ಸರ್ಕಾರಕ್ಕೆ ಸಿಡಿಲಿನಂತೆ ಬಂದೆರಗಿದಾಗ ಸಕ್ಕರೆ ಖಾತೆ ಸಚಿವ ಆರ್ ಬಿ ತಿಮ್ಮಾಪುರ...

ಬಾಗಲಕೋಟೆ/ವಿಜಯಪುರ: ಕಾಂಗ್ರೆಸ್ ಶಾಸಕರ ರಾಜೀನಾಮೆ ಸಮ್ಮಿಶ್ರ ಸರ್ಕಾರಕ್ಕೆ ಸಿಡಿಲಿನಂತೆ ಬಂದೆರಗಿದಾಗ ಸಕ್ಕರೆ ಖಾತೆ ಸಚಿವ ಆರ್ ಬಿ ತಿಮ್ಮಾಪುರ ಅಚ್ಚರಿಕೆಯ ಹೇಳಿಕೆಯೊಂದನ್ನು ನೀಡಿದ್ದಾರೆ. ಬಿಜೆಪಿಯ ಐದು ಮಂದಿ ಶಾಸಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ರಿವರ್ಸ್ ಆಪರೇಷನ್ ನ ಸಂದೇಹಕ್ಕೆ ತುಪ್ಪ ಸುರಿದಿದ್ದಾರೆ.
ನಿನ್ನೆ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯ ಮಧ್ಯೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಅತೃಪ್ತ ಶಾಸಕರ ಬೇಡಿಕೆಗಳನ್ನು ಪಾರ್ಟಿ ಹೈಕಮಾಂಡ್ ಬಗೆಹರಿಸುತ್ತದೆ ಎಂದು ಹೇಳಲಾಗುತ್ತಿದ್ದು ರಾಜಿನಾಮೆಯನ್ನು ಮರುಪರಿಶೀಲಿಸುವಂತೆ ಶಾಸಕರಿಗೆ ಮನವೊಲಿಸಬಹುದು ಎಂಬ ನಂಬಿಕೆ ನಮಗಿದೆ ಎನ್ನುತ್ತಾರೆ ತಿಮ್ಮಾಪುರ.
ನಾನು ಹಿಂದೆ ಹೇಳಿರುವಂತೆ, ಬಿಜೆಪಿಯ ಐವರು ಶಾಸಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದು ಪರಿಸ್ಥಿತಿ ಬಿಗಡಾಯಿಸಿದರೆ ಅವರು ಪಕ್ಷ ಬಿಡಲು ಕೂಡ ತಯಾರಿದ್ದಾರೆ. ಪಕ್ಷದ ಹೈಕಮಾಂಡ್ ಕೂಡ ಅವರ ಜೊತೆ ಸಂಪರ್ಕದಲ್ಲಿದ್ದು, ಫೋನ್ ಮೂಲಕ ಅವರ ಬೆಂಬಲ ಕೇಳಿದ್ದಾರೆ. ಅಗತ್ಯ ಬಿದ್ದರೆ ಕಾಂಗ್ರೆಸ್ ಗೆ ಬೆಂಬಲ ನೀಡುವುದಾಗಿ ಬಿಜೆಪಿಯ  ಅತೃಪ್ತ ಶಾಸಕರು ಹೇಳಿದ್ದಾರೆ. ಭವಿಷ್ಯದಲ್ಲಿ ಅವರ ಹೆಸರುಗಳನ್ನು ಬಹಿರಂಗಪಡಿಸುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT