ಸಾಂದರ್ಭಿಕ ಚಿತ್ರ 
ರಾಜಕೀಯ

ಐವರು ಬಿಜೆಪಿ ಶಾಸಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದಾರೆ: ಸಚಿವ ತಿಮ್ಮಾಪುರ

ಕಾಂಗ್ರೆಸ್ ಶಾಸಕರ ರಾಜೀನಾಮೆ ಸಮ್ಮಿಶ್ರ ಸರ್ಕಾರಕ್ಕೆ ಸಿಡಿಲಿನಂತೆ ಬಂದೆರಗಿದಾಗ ಸಕ್ಕರೆ ಖಾತೆ ಸಚಿವ ಆರ್ ಬಿ ತಿಮ್ಮಾಪುರ...

ಬಾಗಲಕೋಟೆ/ವಿಜಯಪುರ: ಕಾಂಗ್ರೆಸ್ ಶಾಸಕರ ರಾಜೀನಾಮೆ ಸಮ್ಮಿಶ್ರ ಸರ್ಕಾರಕ್ಕೆ ಸಿಡಿಲಿನಂತೆ ಬಂದೆರಗಿದಾಗ ಸಕ್ಕರೆ ಖಾತೆ ಸಚಿವ ಆರ್ ಬಿ ತಿಮ್ಮಾಪುರ ಅಚ್ಚರಿಕೆಯ ಹೇಳಿಕೆಯೊಂದನ್ನು ನೀಡಿದ್ದಾರೆ. ಬಿಜೆಪಿಯ ಐದು ಮಂದಿ ಶಾಸಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ರಿವರ್ಸ್ ಆಪರೇಷನ್ ನ ಸಂದೇಹಕ್ಕೆ ತುಪ್ಪ ಸುರಿದಿದ್ದಾರೆ.
ನಿನ್ನೆ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯ ಮಧ್ಯೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಅತೃಪ್ತ ಶಾಸಕರ ಬೇಡಿಕೆಗಳನ್ನು ಪಾರ್ಟಿ ಹೈಕಮಾಂಡ್ ಬಗೆಹರಿಸುತ್ತದೆ ಎಂದು ಹೇಳಲಾಗುತ್ತಿದ್ದು ರಾಜಿನಾಮೆಯನ್ನು ಮರುಪರಿಶೀಲಿಸುವಂತೆ ಶಾಸಕರಿಗೆ ಮನವೊಲಿಸಬಹುದು ಎಂಬ ನಂಬಿಕೆ ನಮಗಿದೆ ಎನ್ನುತ್ತಾರೆ ತಿಮ್ಮಾಪುರ.
ನಾನು ಹಿಂದೆ ಹೇಳಿರುವಂತೆ, ಬಿಜೆಪಿಯ ಐವರು ಶಾಸಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದು ಪರಿಸ್ಥಿತಿ ಬಿಗಡಾಯಿಸಿದರೆ ಅವರು ಪಕ್ಷ ಬಿಡಲು ಕೂಡ ತಯಾರಿದ್ದಾರೆ. ಪಕ್ಷದ ಹೈಕಮಾಂಡ್ ಕೂಡ ಅವರ ಜೊತೆ ಸಂಪರ್ಕದಲ್ಲಿದ್ದು, ಫೋನ್ ಮೂಲಕ ಅವರ ಬೆಂಬಲ ಕೇಳಿದ್ದಾರೆ. ಅಗತ್ಯ ಬಿದ್ದರೆ ಕಾಂಗ್ರೆಸ್ ಗೆ ಬೆಂಬಲ ನೀಡುವುದಾಗಿ ಬಿಜೆಪಿಯ  ಅತೃಪ್ತ ಶಾಸಕರು ಹೇಳಿದ್ದಾರೆ. ಭವಿಷ್ಯದಲ್ಲಿ ಅವರ ಹೆಸರುಗಳನ್ನು ಬಹಿರಂಗಪಡಿಸುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್​ನ ಸರ್ವೋಚ್ಚ ನಾಯಕನಾಗಿ ಆಯ್ಕೆಯಾಗುತ್ತಿದ್ದಂತೆ ಅಲಿ ಖಮೇನಿ ಪುತ್ರ ಮೊಜ್ತಬಾ ಮೇಲೆ ಇಸ್ರೇಲ್ ಭೀಕರ ದಾಳಿ!

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ಹತ್ಯೆ ಮಾಡ್ತೀವಿ: ಇಸ್ರೇಲ್ ಬೆದರಿಕೆ

'ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಬಗ್ಗೆ ಭಾರತದ ಮೌನ ಅರ್ಥವೇ ಆಗುತ್ತಿಲ್ಲ; ದೇಶದ ಪರವಾಗಿ ನಿಂತಿದ್ದು ಇದೇ ಟೆಹ್ರಾನ್!'

10 ದಿನಕ್ಕಷ್ಟೇ ಮಿಸೈಲ್ ಗಳ ಸ್ಟಾಕ್: ಪೆಂಟಗಾನ್ ಎಚ್ಚರಿಕೆ, ಇರಾನ್ ಯುದ್ಧದಲ್ಲಿ ಅಮೆರಿಕಕ್ಕೆ ಹಿನ್ನಡೆ ಸಾಧ್ಯತೆ?

ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ; ನಿಯಮ ಉಲ್ಲಂಘಿಸುವವರ ವಿರುದ್ಧ ಕೇಸ್ ದಾಖಲು; ಪರಮೇಶ್ವರ ಎಚ್ಚರಿಕೆ

SCROLL FOR NEXT