ಸಾಂದರ್ಭಿಕ ಚಿತ್ರ 
ರಾಜಕೀಯ

ಐವರು ಬಿಜೆಪಿ ಶಾಸಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದಾರೆ: ಸಚಿವ ತಿಮ್ಮಾಪುರ

ಕಾಂಗ್ರೆಸ್ ಶಾಸಕರ ರಾಜೀನಾಮೆ ಸಮ್ಮಿಶ್ರ ಸರ್ಕಾರಕ್ಕೆ ಸಿಡಿಲಿನಂತೆ ಬಂದೆರಗಿದಾಗ ಸಕ್ಕರೆ ಖಾತೆ ಸಚಿವ ಆರ್ ಬಿ ತಿಮ್ಮಾಪುರ...

ಬಾಗಲಕೋಟೆ/ವಿಜಯಪುರ: ಕಾಂಗ್ರೆಸ್ ಶಾಸಕರ ರಾಜೀನಾಮೆ ಸಮ್ಮಿಶ್ರ ಸರ್ಕಾರಕ್ಕೆ ಸಿಡಿಲಿನಂತೆ ಬಂದೆರಗಿದಾಗ ಸಕ್ಕರೆ ಖಾತೆ ಸಚಿವ ಆರ್ ಬಿ ತಿಮ್ಮಾಪುರ ಅಚ್ಚರಿಕೆಯ ಹೇಳಿಕೆಯೊಂದನ್ನು ನೀಡಿದ್ದಾರೆ. ಬಿಜೆಪಿಯ ಐದು ಮಂದಿ ಶಾಸಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ರಿವರ್ಸ್ ಆಪರೇಷನ್ ನ ಸಂದೇಹಕ್ಕೆ ತುಪ್ಪ ಸುರಿದಿದ್ದಾರೆ.
ನಿನ್ನೆ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯ ಮಧ್ಯೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಅತೃಪ್ತ ಶಾಸಕರ ಬೇಡಿಕೆಗಳನ್ನು ಪಾರ್ಟಿ ಹೈಕಮಾಂಡ್ ಬಗೆಹರಿಸುತ್ತದೆ ಎಂದು ಹೇಳಲಾಗುತ್ತಿದ್ದು ರಾಜಿನಾಮೆಯನ್ನು ಮರುಪರಿಶೀಲಿಸುವಂತೆ ಶಾಸಕರಿಗೆ ಮನವೊಲಿಸಬಹುದು ಎಂಬ ನಂಬಿಕೆ ನಮಗಿದೆ ಎನ್ನುತ್ತಾರೆ ತಿಮ್ಮಾಪುರ.
ನಾನು ಹಿಂದೆ ಹೇಳಿರುವಂತೆ, ಬಿಜೆಪಿಯ ಐವರು ಶಾಸಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದು ಪರಿಸ್ಥಿತಿ ಬಿಗಡಾಯಿಸಿದರೆ ಅವರು ಪಕ್ಷ ಬಿಡಲು ಕೂಡ ತಯಾರಿದ್ದಾರೆ. ಪಕ್ಷದ ಹೈಕಮಾಂಡ್ ಕೂಡ ಅವರ ಜೊತೆ ಸಂಪರ್ಕದಲ್ಲಿದ್ದು, ಫೋನ್ ಮೂಲಕ ಅವರ ಬೆಂಬಲ ಕೇಳಿದ್ದಾರೆ. ಅಗತ್ಯ ಬಿದ್ದರೆ ಕಾಂಗ್ರೆಸ್ ಗೆ ಬೆಂಬಲ ನೀಡುವುದಾಗಿ ಬಿಜೆಪಿಯ  ಅತೃಪ್ತ ಶಾಸಕರು ಹೇಳಿದ್ದಾರೆ. ಭವಿಷ್ಯದಲ್ಲಿ ಅವರ ಹೆಸರುಗಳನ್ನು ಬಹಿರಂಗಪಡಿಸುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್