ರಾಜಕೀಯ

ಮೈತ್ರಿ ಸರ್ಕಾರ ಪತನಗೊಳಿಸುವ ಸಂಚು ರೂಪಿಸಿದ್ದು ಸಿದ್ದರಾಮಯ್ಯ: ಪ್ರಹ್ಲಾದ್ ಜೋಶಿ

Lingaraj Badiger
ಹುಬ್ಬಳ್ಳಿ: ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದ ಅಸ್ಥಿರತೆಗೊಳಿಸುವ ಯೋಜನೆ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರು ಶನಿವಾರ ಆರೋಪಿಸಿದ್ದಾರೆ.
ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಚ್ ಡಿ ದೇವೇಗೌಡ ಅವರ ಕುಟುಂಬ ಅಧಿಕಾರದಲ್ಲಿ ಮುಂದುವರೆಯುವುದು ಸಿದ್ದರಾಮಯ್ಯ ಅವರಿಗೆ ಇಷ್ಟವಿರಲಿಲ್ಲ. ಹೀಗಾಗಿ ಶಾಸಕರ ರಾಜೀನಾಮೆ ಅವರ ಹೇಳಿಕೆಗಳು ಈ ಎಲ್ಲದರ ಹಿಂದಿನ ಸೂತ್ರದಾರ ಅವರೇ ಆಗಿದ್ದಾರೆ ಎಂದರು.
ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರ ಜಿ. ಪರಮೇಶ್ವರ ಅವರಿಗೆ ನಾಯಕತ್ವ ಸಿಗುತ್ತಿದೆ ಎಂಬ ಆತಂಕದಿಂದ ಸಿದ್ದರಾಮಯ್ಯ ಇಂತಹ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಜೋಶಿ ಗಂಭೀರ ಆರೋಪ ಮಾಡಿದ್ದಾರೆ.
ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಪಾತ್ರ ಇಲ್ಲ. ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ನಾಯಕತ್ವ ಯಾವುದೇ ಚರ್ಚೆ ನಡೆಸುತ್ತಿಲ್ಲ. ಒಂದು ವೇಳೆ ಮೈತ್ರಿ ಸರ್ಕಾರ ಪತನವಾದರೆ ನೂತನ ಸರ್ಕಾರ ರಚಿಸುವ ಬಗ್ಗೆ ಬಿಜೆಪಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದಿದ್ದಾರೆ.
SCROLL FOR NEXT