ರಾಜಕೀಯ

ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಗೆ ಹೋಗಲಿ: ಬಸವರಾಜ ಹೊರಟ್ಟಿ

Lingaraj Badiger
ಬೆಳಗಾವಿ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಸಭೆಯನ್ನು ವಿಸರ್ಜಿಸುವುದು ಸೂಕ್ತ ಮಾಜಿ ಸಚಿವ ಮತ್ತು ಜೆಡಿಎಸ್ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ಭಾನುವಾರ ಹೇಳಿದ್ದಾರೆ.
ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ಕುಮಾರಸ್ವಾಮಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಗೆ ಹೋಗುವುದು ಉತ್ತಮ ಎಂದರು.
14 ಶಾಸಕರು ರಾಜೀನಾಮೆ ನೀಡಿರುವುದು ರಾಜ್ಯದ ಹಿದದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ ಮತ್ತು ಎಲ್ಲಾ ಶಾಸಕರನ್ನು ಮಂತ್ರಿ ಮಾಡಲು ಆಗುವುದಿಲ್ಲ ಎಂದರು.
ಇದೇ ವೇಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲಾ 14 ಶಾಸಕರ ರಾಜೀನಾಮೆಯನ್ನು ಸ್ಪೀಕರ್ ರಮೇಶ್ ಕುಮಾರ್ ಅಂಗೀಕರಿಸಬೇಕು ಎಂದು ಬಸವರಾಜ ಹೊರಟ್ಟಿ ಅವರು ಒತ್ತಾಯಿಸಿದ್ದಾರೆ.
ನಿನ್ನೆ ಜೆಡಿಎಸ್ ಮತ್ತು ಕಾಂಗ್ರೆಸ್‌ನ 14 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಲ್ಲಿ ಹಲವರು ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದ ವಸೂಲಿಯಲ್ಲಿ ತೊಡಗಿದ್ದಾರೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವರಿಗೆ ವಿಶ್ವಾಸವಿಲ್ಲ. ರಾಜಕೀಯ ಆಟ ಆಡುತ್ತಿರುವ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ತಕ್ಷಣ ಸ್ವೀಕರಿಸಬೇಕು ಎಂದರು.
ಇಂತಹ ಬೆಳವಣಿಗೆಯನ್ನು ನಾನೆಂದೂ ಕಂಡಿರಲಿಲ್ಲ. ರಾಜೀನಾಮೆಯನ್ನು ಸ್ಪೀಕರ್ ಅವರಿಗೆ ಸಲ್ಲಿಸಬೇಕು ಆದರೆ, ಇದೇ ಮೊದಲ ಬಾರಿಗೆ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಲಾಗಿದೆ. ಈ ಮೂಲಕ ಹೊಸ ಸಂಪ್ರದಾಯ ಹುಟ್ಟುಹಾಕಲಾಗಿದೆ ಎಂದು ಹೊರಟ್ಟಿ ಹೇಳಿದರು.
SCROLL FOR NEXT