ಸಂಗ್ರಹ ಚಿತ್ರ 
ರಾಜಕೀಯ

ಸಿದ್ದರಾಮಯ್ಯ, ಪರಮೇಶ್ವರ್ ನಡುವೆ ತೀವ್ರ ಮಾತಿನ ಜಟಾಪಟಿ

ಅತೃಪ್ತ ಶಾಸಕರು ರಾಜೀನಾಮೆ ನೀಡಲು ಕಾರಣವಾದ ವಿಷಯಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನಡುವೆ ತೀವ್ರ ಮಾತಿನ ಜಟಾಪಟಿ ನಡೆದಿದೆ.

ಬೆಂಗಳೂರು: ಅತೃಪ್ತ ಶಾಸಕರು ರಾಜೀನಾಮೆ ನೀಡಲು ಕಾರಣವಾದ ವಿಷಯಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನಡುವೆ ತೀವ್ರ ಮಾತಿನ ಜಟಾಪಟಿ ನಡೆದಿದೆ.
 ಪಕ್ಷದ ಉಸ್ತುವಾರಿ ವೇಣುಗೋಪಾಲ್   ಅವರ ನೇತೃತ್ವದಲ್ಲಿ ನಿನ್ನೆ ರಾತ್ರಿ ನಡೆದ ಸಭೆಯಲ್ಲಿ ಪರಮೇಶ್ವರ್ ಹಾಗೂ ಸಿದ್ದರಾಮಯ್ಯ ನಡುವೆ ತೀವ್ರ ವಾಗ್ಯುದ್ದವೇ ನಡೆದಿರುವ ಬಗ್ಗೆ ತಿಳಿದುಬಂದಿದೆ. ರಾಜೀನಾಮೆ ನೀಡುವುದಕ್ಕೂ ಮೊದಲು ಬೈರತಿ ಬಸವರಾಜು ಅವರು ನಿಮ್ಮ ಮನೆಗೆ ಬಂದಿದ್ದರಲ್ಲವೇ ? ಇದಕ್ಕೆಲ್ಲಾ ನಿಮ್ಮ ಬೆಂಬಲಿಗರೆ ಕಾರಣ ಎಂದು ಆರೋಪಿಸಿದ್ದಾರೆ.
ಇದರಿಂದ ಕೆರಳಿದ ಸಿದ್ದರಾಮಯ್ಯ, ನಿಮ್ಮ ಕಾರ್ಯ ವೈಖರಿಗೆ ಶಾಸಕರು ಅಸಮಾಧಾನಗೊಂಡಿದ್ದಾರೆ. ಪಕ್ಷದ ಶಾಸಕರನ್ನು ನೀವು ಸರಿಯಾಗಿ ನಡೆಸಿಕೊಳ್ಳುತ್ತಿದ್ದರೆ ಯಾರೂ ರಾಜೀನಾಮೆ ನೀಡಲು ಮುಂದಾಗುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ ಎಂಬುದು ಗೊತ್ತಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ಮೊದಲಿನಿಂದಲೂ ಸಿದ್ದರಾಮಯ್ಯ, ಪರಮೇಶ್ವರ್ ಬಣಗಳಿದ್ದು, ಅನೇಕ ವಿಚಾರಗಳಲ್ಲಿ ಎರಡು ಗುಂಪಿನ ನಡುವೆ ಕಿತ್ತಾಟ ನಡೆದುಕೊಂಡೆ ಬಂದಿದೆ. ಈಗ  ರಾಜೀನಾಮೆ ನೀಡಿರುವ ಶಾಸಕರ ಪೈಕಿ ಸಿದ್ದರಾಮಯ್ಯ ಆಪ್ತರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಒತ್ತಾಯಿಸುತ್ತಿದ್ದಾರೆ.
 ಇದು ಪರಮೇಶ್ವರ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಒಟ್ಟಾರೇ ಶಾಸಕರ ಮನವೊಲಿಸುವಲ್ಲಿ ಇಬ್ಬರು ವಿಫಲವಾಗಿದ್ದು, ಮುಂದಿನ ರಾಜ್ಯ ರಾಜಕೀಯದ ಬೆಳವಣಿಗೆಗಳು ತೀವ್ರ ಕುತೂಹಲ ಮೂಡಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT