ಸಂಗ್ರಹ ಚಿತ್ರ 
ರಾಜಕೀಯ

ಸಿದ್ದರಾಮಯ್ಯ, ಪರಮೇಶ್ವರ್ ನಡುವೆ ತೀವ್ರ ಮಾತಿನ ಜಟಾಪಟಿ

ಅತೃಪ್ತ ಶಾಸಕರು ರಾಜೀನಾಮೆ ನೀಡಲು ಕಾರಣವಾದ ವಿಷಯಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನಡುವೆ ತೀವ್ರ ಮಾತಿನ ಜಟಾಪಟಿ ನಡೆದಿದೆ.

ಬೆಂಗಳೂರು: ಅತೃಪ್ತ ಶಾಸಕರು ರಾಜೀನಾಮೆ ನೀಡಲು ಕಾರಣವಾದ ವಿಷಯಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನಡುವೆ ತೀವ್ರ ಮಾತಿನ ಜಟಾಪಟಿ ನಡೆದಿದೆ.
 ಪಕ್ಷದ ಉಸ್ತುವಾರಿ ವೇಣುಗೋಪಾಲ್   ಅವರ ನೇತೃತ್ವದಲ್ಲಿ ನಿನ್ನೆ ರಾತ್ರಿ ನಡೆದ ಸಭೆಯಲ್ಲಿ ಪರಮೇಶ್ವರ್ ಹಾಗೂ ಸಿದ್ದರಾಮಯ್ಯ ನಡುವೆ ತೀವ್ರ ವಾಗ್ಯುದ್ದವೇ ನಡೆದಿರುವ ಬಗ್ಗೆ ತಿಳಿದುಬಂದಿದೆ. ರಾಜೀನಾಮೆ ನೀಡುವುದಕ್ಕೂ ಮೊದಲು ಬೈರತಿ ಬಸವರಾಜು ಅವರು ನಿಮ್ಮ ಮನೆಗೆ ಬಂದಿದ್ದರಲ್ಲವೇ ? ಇದಕ್ಕೆಲ್ಲಾ ನಿಮ್ಮ ಬೆಂಬಲಿಗರೆ ಕಾರಣ ಎಂದು ಆರೋಪಿಸಿದ್ದಾರೆ.
ಇದರಿಂದ ಕೆರಳಿದ ಸಿದ್ದರಾಮಯ್ಯ, ನಿಮ್ಮ ಕಾರ್ಯ ವೈಖರಿಗೆ ಶಾಸಕರು ಅಸಮಾಧಾನಗೊಂಡಿದ್ದಾರೆ. ಪಕ್ಷದ ಶಾಸಕರನ್ನು ನೀವು ಸರಿಯಾಗಿ ನಡೆಸಿಕೊಳ್ಳುತ್ತಿದ್ದರೆ ಯಾರೂ ರಾಜೀನಾಮೆ ನೀಡಲು ಮುಂದಾಗುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ ಎಂಬುದು ಗೊತ್ತಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ಮೊದಲಿನಿಂದಲೂ ಸಿದ್ದರಾಮಯ್ಯ, ಪರಮೇಶ್ವರ್ ಬಣಗಳಿದ್ದು, ಅನೇಕ ವಿಚಾರಗಳಲ್ಲಿ ಎರಡು ಗುಂಪಿನ ನಡುವೆ ಕಿತ್ತಾಟ ನಡೆದುಕೊಂಡೆ ಬಂದಿದೆ. ಈಗ  ರಾಜೀನಾಮೆ ನೀಡಿರುವ ಶಾಸಕರ ಪೈಕಿ ಸಿದ್ದರಾಮಯ್ಯ ಆಪ್ತರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಒತ್ತಾಯಿಸುತ್ತಿದ್ದಾರೆ.
 ಇದು ಪರಮೇಶ್ವರ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಒಟ್ಟಾರೇ ಶಾಸಕರ ಮನವೊಲಿಸುವಲ್ಲಿ ಇಬ್ಬರು ವಿಫಲವಾಗಿದ್ದು, ಮುಂದಿನ ರಾಜ್ಯ ರಾಜಕೀಯದ ಬೆಳವಣಿಗೆಗಳು ತೀವ್ರ ಕುತೂಹಲ ಮೂಡಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT